Skip to main content

ಎಸ್ ವೈ ಎಸ್ ಆಝಾದ್ ನಗರ ಮಾಸ್ತಿಕಟ್ಟೆ ಬ್ರಾಂಚ್ ನೂತನ ಪದಾಧಿಕಾರಿಗಳ ಆಯ್ಕೆ

ಎಸ್ ವೈ ಎಸ್ ಆಝಾದ್ ನಗರ ಮಾಸ್ತಿಕಟ್ಟೆ ಬ್ರಾಂಚ್ ಮಹಾಸಭೆಯು ಆಝಾದ್ ನಗರದಲ್ಲಿ ನಡೆಯಿತು.
ನೂತನಾಧ್ಯಕ್ಷರಾಗಿ ರಫೀಖ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಖ್ ಹಾಗು ಕೋಶಾಧಿಕಾರಿಯಾಗಿ ಮುಹಮ್ಮದ್ ಫ್ಯಾನ್ಸಿ ರವರನ್ನು ಆಯ್ಕೆ ಮಮಾಡಲಾಯಿತು.
ಈ ಸಂದರ್ಭದಲ್ಲಿ ಎಸ್ ವೈ ಎಸ್ ಮಂಜೇಶ್ವರ ಮಂಡಲ ಅಧ್ಯಕ್ಷರಾದ ಶರೀಫ್ ಸಹದಿ, ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಹನೀಫ್ ಹಾಜಿ, ಉಳ್ಳಾಲ ನಗರ ಸಭಾ ಸದಸ್ಯ ಶೌಕತ್,ಸಯ್ಯಿದ್ ಮದನಿ ಅರಬಿಕ್ ಎಜ್ಯುಕೇಶನಲ್ ಟ್ರಸ್ಟ್ ಇದರ ಮಾಜಿ ಕಾರ್ಯದರ್ಶಿ ಝಿಯಾದ್ ತಂಗಳ್,ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪ್ರ ಕಾರ್ಯದರ್ಶಿ ತ್ವಾಹಿರ್ ಹಾಜಿ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕೋಶಾಧಿಕಾರಿ ಇಸಾಕ್ ರಹ್ಮಾನಿಯ, ಎಸ್ಸೆಸ್ಸೆಫ್ ದ.ಕ ಜಿಲ್ಲಾ ಮಾಜಿ ಕೋಶಾಧಿಕಾರಿ ಅಲ್ತಾಫ್ ಕುಂಪಲ, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಮಾಜಿ ಕೋಶಾಧಿಕಾರಿ ಇಲ್ಯಾಸ್ ಕೈಕೋ ಹಾಗು ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Comments