ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಹಾಗು ಎಸ್ಸೆಸ್ಸೆಫ್ ಮೇಲಂಗಡಿ ಶಾಖೆಯ ಜಂಟಿ ಆಶ್ರಯದಲ್ಲಿ 2017 ಫೆಬ್ರವರಿ 18 ಮತ್ತು 19 ರ ಮಗ್ರಿಬ್ ನಮಾಜು ಬಳಿಕ ರಿಫಾಯೀ ಮಾಲೆ ಆಲಾಪನೆ, ಹಾಗು ಜಲಾಲಿಯ್ಯ ರಾತೀಬು ಫಿರ್ದೌಸ್ ಅಪಾರ್ಟ್ ಮೆಂಟ್ ಮೇಲಂಗಡಿಯಲ್ಲಿ ನಡೆಯಿತು.
ರಿಫಾಯೀ ಮಾಲೆ ಆಲಾಪನೆ ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಅಧ್ಯಕ್ಷ ಬಶೀರ್ ಸಖಾಫಿ ಉಳ್ಳಾಲ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಎಸ್ ವೈ ಎಸ್ ಮಂಜೇಶ್ವರ ಮಂಡಲ ಅಧ್ಯಕ್ಷರಾದ ಶರೀಫ್ ಸಅದಿ ಅನುಸ್ಮರಣಾ ಪ್ರಭಾಷಣ ಮಾಡಿದರು.
ಜಲಾಲಿಯ್ಯ ರಾತೀಬ್ ಸಂಗಮ ಎಸ್ಸೆಸ್ಸೆಫ್ ಮೇಲಂಗಡಿ ಶಾಖಾಧ್ಯಕ್ಷ ಅಬೂ ಅನಸ್ ಜಮಾಲ್ ಉಸ್ತಾದರ ಅಧ್ಯಕ್ಷತೆಯೊಂದಿಗೆ ಸಯ್ಯಿದ್ ಮುಷ್ತಾಕುರ್ರಹ್ಮಾನ್ ತಂಗಳ್ ಚಟ್ಟೆಕಲ್ಲು ಮಲಪ್ಪುರಂ ಇವರ ನೇತ್ರತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಎಸ್ ವೈ ಎಸ್ ನೂತನಾಧ್ಯಕ್ಷರಾಗಿ ಆಯ್ಕೆಯಾದ ಸಯ್ಯಿದ್ ಜಲಾಲ್ ತಂಗಳ್ ಇವರನ್ನು ಶಾಲುಹೊದಿಸಿ ಅಭಿನಂದಿಸಿ ಸನ್ಮಾನಿಸಲಾಯಿತು.
ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕೋಶಾಧಿಕಾರಿ ಇಸಾಕ್ ಪೇಟೆ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷ ತ್ವಾಹಿರ್ ಹಾಜಿ, ಸಯ್ಯಿದ್ ಮದನಿ ಸುನ್ನೀ ಸೆಂಟ್ರಲ್ ಕಮಿಟಿ ಮಾಜಿ ಅಧ್ಯಕ್ಷ ಕರೀಂ ಹಾಜಿ, ಎಸ್ಸೆಸ್ಸೆಫ್ ಆಝಾದ್ ನಗರ ಶಾಖಾಧ್ಯಕ್ಷ ಹಾಫಿಝ್ ಮುಈನ್ ಉಳ್ಳಾಲ, ಸತ್ತಾರ್ ಮೇಲಂಗಡಿ, ಬಾವಾಕ ಫಿರ್ದೌಸ್ ಹಾಗು ಎಸ್ಸೆಸ್ಸೆಫ್ ಎಸ್ ವೈ ಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಎಸ್ಸೆಸ್ಸೆಫ್ ಮೇಲಂಗಡಿ ಶಾಖಾ ಪ್ರಧಾನ ಕಾರ್ಯದರ್ಶಿ ತಶ್ರೀಫ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...
Comments