ಎಸ್ ವೈ ಎಸ್ ಉಳ್ಳಾಲಬೈಲು ಬೊಟ್ಟು ಬ್ರಾಂಚಿಗೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಕೋಶಾಧಿಕಾರಿ ಇಸಾಕ್ ರಹ್ಮಾನಿಯ ಪೇಟೆ ಇವರ ಅಧ್ಯಕ್ಷತೆಯಲ್ಲಿ ಉಳ್ಳಾಲಬೈಲು ಯೂಸುಫ್ ಅಪಾರ್ಟ್ ಮೆಂಟ್ ನಲ್ಲಿ ಚಾಲನೆ ನೀಡಲಾಯಿತು.
ಯೂಸುಫ್ ಮುಸ್ಲಿಯಾರ್ ದುವಾ ನೆರವೇರಿಸಿದರು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಜೊತೆ ಕಾರ್ಯದರ್ಶಿ ಅಲ್ತಾಫ್ ಕುಂಪಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಎಸ್ ವೈ ಎಸ್ ಗೆ ಪಾದಾರ್ಪಣೆಗೈದ ನಝೀರ್ ಯು.ಬಿ ರವರಿಗೆ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಯೂಸುಫ್ ಮುಸ್ಲಿಯಾರ್ ಉಳ್ಳಾಲಬೈಲು, ಉಪಾಧ್ಯಕ್ಷರಾಗಿ ಕರೀಂ, ಪ್ರಧಾನ ಕಾರ್ಯದರ್ಶಿಯಾಗಿ ಖಲೀಲ್, ಜೊತೆ ಕಾರ್ಯದರ್ಶಿಯಾಗಿ ನಝೀರ್ ಹಾಗು ಕೋಶಾಧಿಕಾರಿಯಾಗಿ ಹನೀಫ್ ಬೊಟ್ಟುರವರನ್ನು ಆರಿಸಲಾಯಿತು.ಈ ಸಂದರ್ಭದಲ್ಲಿ ಎಸ್ ವೈ ಎಸ್ ಉಳ್ಳಾಲಬೈಲು ಬೊಟ್ಟು ಕಾರ್ಯಕರ್ತರು ಉಪಸ್ಥಿತರಿದ್ದರು. ನೂತನ ಪ್ರಧಾನ ಕಾರ್ಯದರ್ಶಿ ಖಲೀಲ್ ಧನ್ಯವಾದಗೈದರು.
ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್
ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್ ಉಳ್ಳಾಲದ ಅಕ್ಕರೆಕೆರೆಯ ಸಂಘಟನಾ ಕಛೇರಿ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು. ಈ ಸಭೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಮೌಲಿದ್ ಮಜ್ಲಿಸಿನ ನೇತ್ರತ್ವವನ್ನು ಅಬೂ ಮಫಾಝ್ ಮದನಿ ವಹಿಸಿದರು. ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಮಾತನಾಡಿ ವಾರಕ್ಕೊಮ್ಮೆ ಶುಕ್ರವಾರ ಸುಬಹ್ ನಮಾಝ್ ಬಳಿಕದ ಮಜ್ಲಿಸ್, ಮಾಸಿಕ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸ್ ಹಾಗು ಶಾಖೆಯ ಆಶ್ರಯದಲ್ಲಿ ನಡೆಯುವ ಇತರ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ರಬೇಕೆಂದು ತಿಳಿಸಿದರು. ನವಾಝ್ ಸಖಾಫಿ ಉಳ್ಳಾಲ ದುಆ ನೆರವೇರಿಸಿದರು. ಎಸ್ ವೈ ಎಸ್ ಶಾಖಾ ಕೋಶಾಧಿಕಾರಿ ಆರ್ ಕೆ ಮದನಿ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಕೆ ಎಂ ಜೆ ಶಾಖಾಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಟೇಲ್ ಕಂಪೌಂಡ್ ಮತ್ತು ಶಾಖಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು.
Comments