ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕೇಂದ್ರ ಮುಶಾವರ ಸಮಿತಿ ಸದಸ್ಯರಾಗಿ ಇತ್ತೀಚೆಗೆ ಆಯ್ಕೆಯಾದ ಸಯ್ಯಿದ್ ಫಝಲ್ ಕೋಯಮ್ಮ ತಂಗಳ್ ಕೂರತ್ ರವರಿಗೆ ಸನ್ಮಾನ
ಉಳ್ಳಾಲ ಮದನಿನಗರ : ಮದನಿ ನಗರ ಜುಮಾ ಮಸೀದಿಯಲ್ಲಿ ಮಾಸಂಪ್ರತಿ ನಡೆಸಿಕೊಂಡು ಬರುವ ಸ್ವಲಾತ್ ಮಜ್ಲಿಸ್ ನ ವಾರ್ಷಿಕ ಸಮಾರಂಭವು ದ.ಕ ಜಿಲ್ಲಾ ಸಂಯುಕ್ತ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಗಳ್ ಕೂರತ್ ರವರ ನೇತ್ರತ್ವದಲ್ಲಿ ನಡೆಯಿತು.
ಸ್ಥಳೀಯ ಖತೀಬರಾದ ಉಸ್ಮಾನ್ ಜೌಹರಿ ನೆಲ್ಯಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಇದರ ಕೇಂದ್ರ ಮುಶಾವರ ಸಮಿತಿ ಸದಸ್ಯರಾಗಿ ಇತ್ತೀಚೆಗೆ ಆಯ್ಕೆಯಾದ ಕೂರತ್ ತಂಗಳ್ ರವರನ್ನು SYS ಮದನಿನಗರ ಮತ್ತು ಜಮಾಅತ್ ಕಮಿಟಿ ವತಿಯಿಂದ ಕ್ಯಾಶ್ ಆವಾರ್ಡ್ ನೀಡಿ ಶಾಲುಹೊದಿಸಿ ಸನ್ಮಾನಿಸಲಾಯಿತು. ಜಮಾಅತ್ ಅಧ್ಯಕ್ಷ ಅಬ್ಬಾಸ್ ಹಾಗು ಮತ್ತಿತ್ತರ ಗಣ್ಯರು ಉಪಸ್ಥಿತರಿದ್ದರು
Comments