ಎಸ್ ವೈ ಎಸ್ ಉಳ್ಳಾಲ ಸೆಂಟರ್ ಆಶ್ರಯದಲ್ಲಿ ಬ್ರಹತ್ ತಹ್ಲೀಲ್ ಮಜ್ಲಿಸ್ ಹಾಗು ಪ್ರಾರ್ಥನಾ ಸಂಗಮ ಸೆಂಟರ್ ಅಧ್ಯಕ್ಷ ಸಯ್ಯಿದ್ ಜಲಾಲುದ್ದೀನ್ ತಂಗಳ್ ಇವರ ಅಧ್ಯಕ್ಷತೆಯಲ್ಲಿ ಮೇಲಂಗಡಿಯ ಫಿರ್ದೌಸ್ ಅಪಾರ್ಟ್ ಮೆಂಟ್ ವರಾಂಡದಲ್ಲಿ ನಡೆಯಿತು.
ಎಸ್ ವೈ ಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷ ಬಶೀರ್ ಅಹ್ಸನಿ ತೋಡಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಯ್ಯಿದ್ ಸಲಾಂ ಮದನಿ ಅಳೇಕಲ ದುವಾ ನೆರವೇರಿಸಿದರು. ಇತ್ತೀಚೆಗೆ ಕಾಸರಗೋಡ್ ಚೂರಿಯ ಮಸೀದಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಕೊಟ್ಟಮುಡಿ ಆಝಾದ್ ನಗರದ ರಿಯಾಝ್ ಉಸ್ತಾದ್ ಹಾಗು ಪೆರಿಯಡ್ಕ ಮಹಮೂದ್ ಬಾಖವಿ ಉಸ್ತಾದರ ಮೇಲೆ ತಹಲೀಲ್ ಸಮರ್ಪಿಸಲಾಯಿತು. ಪ್ರಾರ್ಥನಾ ಸಂಗಮದ ನೇತ್ರತ್ವವನ್ನು ಸಯ್ಯಿದ್ ಜಲಾಲುದ್ದೀನ್ ತಂಗಳ್ ವಹಿಸಿದರು. ಈ ಸಂದರ್ಭದಲ್ಲಿ ರಿಯಾಝ್ ಉಸ್ತಾದರ ಕುಟುಂಬದ ನೆರವಿಗಾಗಿ ಹಾಗು ಬಡ ಕುಟುಂಬವೊಂದರ ಹೆಣ್ಣಿನ ಮದುವೆಗಾಗಿ ಫಂಡ್ ಶೇಖರಿಸಲಾಯಿತು.
ಈ ಸಂದರ್ಭದಲ್ಲಿ ಸೆಂಟರ್ ಉಪಾಧ್ಯಕ್ಷ ತ್ವಾಹಿರ್ ಹಾಜಿ, ಸೆಂಟರ್ ಕೋಶಾಧಿಕಾರಿ ಇಸಾಕ್ ಪೇಟೆ, ಎಸ್ ವೈ ಎಸ್ ದ.ಕ ಜಿಲ್ಲಾ ಕೋಶಾಧಿಕಾರಿ ಖತರ್ ಬಾವ ಹಾಜಿ, ಸೆಂಟರ್ ಸಂಚಾಲಕ ಅಶ್ರಫ್ ಹಾಜಿ, ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಅಧ್ಯಕ್ಷ ಬಶೀರ್ ಸಖಾಫಿ ಉಳ್ಳಾಲ, ಮುಕ್ಕಚ್ಚೇರಿ ಮಸ್ಜಿದ್ ಅಧ್ಯಕ್ಷ ಇಸ್ಮಾಯಿಲ್, ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ, ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಕಾದರ್, ಝಿಯಾದ್ ತಂಗಳ್, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷ ಸಯ್ಯಿದ್ ಖುಬೈಬ್ ತಂಗಳ್, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ ಹಾಗು ಸೆಂಟರ್ ನಾಯಕರು ಹಾಗು ಅಧೀನ ಬ್ರಾಂಚುಗಳ ನಾಯಕರು ಹಾಗು ಕಾರ್ಯಕರ್ತರು ಉಪಸ್ಥಿತರಿದ್ದರು. ಸೆಂಟರ್ ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
Comments