ಎಸ್ ವೈ ಎಸ್ ಉಳ್ಳಾಲ ಸೆಂಟರ್ ಆಶ್ರಯದಲ್ಲಿ ರಿಯಾಝ್ ಮುಸ್ಲಿಯಾರ್ ಕುಟುಂಬದ ನೆರವಿಗೆ ಸಂಗ್ರಹಿಸಿದ ಫಂಡನ್ನು ರಿಯಾಝ್ ಮುಸ್ಲಿಯಾರ್ ಇವರ ಪತ್ನಿ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷ ಸಯ್ಯಿದ್ ಜಲಾಲುದ್ದೀನ್ ತಂಗಳ್, ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ, ಸಂಚಾಲಕ ಅಶ್ರಫ್ ಹಾಜಿ ಮುಕ್ಕಚ್ಚೇರಿ, ಕೋಶಾಧಿಕಾರಿ ಇಸಾಕ್ ಪೇಟೆ ಹಾಗು ಸಯ್ಯಿದ್ ಮದನಿ ದರ್ಗಾ ಮತ್ತು ಕೇಂದ್ರ ಜುಮಾ ಮಸೀದಿ ಉಳ್ಳಾಲ ಇದರ ಮಾಜಿ ಸಮಿತಿಗಳಾದ ಫಾರೂಖ್ ಕೋಡಿ ಹಾಗು ನಾಝಿಂ ಮುಕ್ಕಚ್ಚೇರಿ ಉಪಸ್ಥಿತರಿದ್ದರು.
ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್
ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್ ಉಳ್ಳಾಲದ ಅಕ್ಕರೆಕೆರೆಯ ಸಂಘಟನಾ ಕಛೇರಿ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು. ಈ ಸಭೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಮೌಲಿದ್ ಮಜ್ಲಿಸಿನ ನೇತ್ರತ್ವವನ್ನು ಅಬೂ ಮಫಾಝ್ ಮದನಿ ವಹಿಸಿದರು. ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಮಾತನಾಡಿ ವಾರಕ್ಕೊಮ್ಮೆ ಶುಕ್ರವಾರ ಸುಬಹ್ ನಮಾಝ್ ಬಳಿಕದ ಮಜ್ಲಿಸ್, ಮಾಸಿಕ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸ್ ಹಾಗು ಶಾಖೆಯ ಆಶ್ರಯದಲ್ಲಿ ನಡೆಯುವ ಇತರ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ರಬೇಕೆಂದು ತಿಳಿಸಿದರು. ನವಾಝ್ ಸಖಾಫಿ ಉಳ್ಳಾಲ ದುಆ ನೆರವೇರಿಸಿದರು. ಎಸ್ ವೈ ಎಸ್ ಶಾಖಾ ಕೋಶಾಧಿಕಾರಿ ಆರ್ ಕೆ ಮದನಿ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಕೆ ಎಂ ಜೆ ಶಾಖಾಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಟೇಲ್ ಕಂಪೌಂಡ್ ಮತ್ತು ಶಾಖಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು.
Comments