ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಇವರ ತಮ್ಮ ಶಿಹಾಬುದ್ದೀನ್ ಅಕ್ಕರೆಕೆರೆ ಸುರಸುಂದರ ಕೋಟ್ಯಾನುಕೋಟಿ ನಿರೀಕ್ಷೆಯೊಂದಿಗೆ ವೈವಾಹಿಕ ಬದುಕಿಗೆ ಪಾದಾರ್ಪಣೆಗೈದರು. ಅಕ್ಕರೆಕೆರೆಯ ಅಬೂಬಕರ್ ಸಿದ್ದೀಖ್ ಮಸ್ಜಿದ್ ನಲ್ಲಿ ನಿಕಾಹ್ ಕಾರ್ಯಕ್ರಮ ನೆರವೇರಿತು.
ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖೆ ಹಾಗು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ವತಿಯಿಂದ ವೈವಾಹಿಕ ಬದುಕಿಗೆ ಪಾದಾರ್ಪಣೆಗೈದ ಶಿಹಾಬುದ್ದೀನ್ ಇವರಿಗೆ ಮಂಗಳಾಶಂಶೆಯನ್ನು ತಿಳಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಎಸ್ ವೈ ಎಸ್ ಅಕ್ಕರೆಕೆರೆ ಬ್ರಾಂಚ್ ನಿಕಟಪೂರ್ವ ಅಧ್ಯಕ್ಷ ಉಸ್ಮಾನ್ ಸಖಾಫಿ ಪೊಳಲಿ, ಪಟ್ಲ ಮಸೀದಿಯ ಮುದರ್ರಿಸ್ ಶರೀಫ್ ಕಾಮಿಲ್ ಸಖಾಫಿ, ಎಸ್ ವೈ ಎಸ್ ಉಪಾಧ್ಯಕ್ಷ ಅಬ್ದುಲ್ಲತೀಫ್ ಅಕ್ಕರೆಕೆರೆ, ಎಸ್ಸೆಸ್ಸೆಫ್ ಅಕ್ಕರೆಕೆರೆ ಶಾಖಾ ಪ್ರಧಾನ ಕಾರ್ಯದರ್ಶಿ ಆಸಿಫ್ ಅಕ್ಕರೆಕೆರೆ, ಎಸ್ ವೈ ಎಸ್ ಅಕ್ಕರೆಕೆರೆ ಬ್ರಾಂಚ್ ಕಾರ್ಯಕಾರಿ ಸಮಿತಿ ಸದಸ್ಯರು ಹಾಗು ಶಿಹಾಬುದ್ದೀನ್ ಇವರ ತಂದೆ ಹಸನ್ ಬಾವ ಹಾಜಿ ಉಪಸ್ಥಿತರಿದ್ದರು.
ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...
Comments