Skip to main content

ತಝ್ಕಿಯತ್ ನೈಟ್ ಕಾರ್ಯಕ್ರಮ.. ಆತ್ಮ ಶುದ್ಧಿಯಿಲ್ಲದೆ ನಿರ್ವಹಿಸಲ್ಪಡುವ ಇಬಾದತುಗಳು ನಿಷ್ಫಲ - ಹಸನ್ ಮುಬಾರಕ್ ಸಖಾಫಿ

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಆಶ್ರಯದಲ್ಲಿ ಪವಿತ್ರ ರಂಝಾನ್ ತಿಂಗಳಲ್ಲಿ ಬದುಕು ಧನ್ಯಗೊಳಿಸುವ ಸಲುವಾಗಿ ತಝ್ಕಿಯತ್ ನೈಟ್ ಕಾರ್ಯಕ್ರಮ ಉಳ್ಳಾಲದ ಮಂಚಿಲ ಜುಮಾ ಮಸೀದಿಯಲ್ಲಿ ನಡೆಯಿತು.
ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮಂಚಿಲ ಜುಮಾ ಮಸೀದಿಯ ಖತೀಬರಾದ ಹಸನ್ ಮುಬಾರಕ್ ಸಖಾಫಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಆತ್ಮ ಸಂಶುದ್ಧವಾಗಿದ್ದರೆ ಮಾತ್ರ ಮುಸ್ಲಿಮನ ಸರ್ವ ಇಬಾದತುಗಳು ಸ್ವೀಕಾರ್ಹ ಯೋಗ್ಯವಾಗಲು ಸಾಧ್ಯ. ಆತ್ಮ ಶುದ್ಧಿಯಿಲ್ಲದೆ ನಿರ್ವಹಿಸಲ್ಪಡುವ ಇಬಾದತುಗಳು ನಿಷ್ಫಲ ಅಂದರು. ಆತ್ಮ ಶುದ್ಧೀಕರಣ ವಿಷಯದಲ್ಲಿ ಚೊಂಬುಗುಡ್ಡೆ ಜುಮಾ ಮಸೀದಿಯ ಖತೀಬರಾದ ಹಂಝ ಮದನಿ ಗುರುವಾಯನಕೆರೆ ತರಗತಿ ನಡೆಸಿ ಹೇಳಿದರು. ಪ್ರವಾದಿ ಸ.ಅ ತನ್ನ ಅನುಯಾಯಿಗಳಾದ ಸ್ವಹಾಬಿಗಳೊಂದಿಗೆ ಒಮ್ಮೆ ಹೇಳಿದರು. ""ಸ್ವಹಾಬಿಗಳೇ ನೀವು ನಿಮ್ಮ ಶರೀರದ ಎರಡು ಅಂಗಗಳಾದ ನಾಲಗೆ ಮತ್ತು ಗುಪ್ತಾಂಗದ ಮೂಲಕ ಯಾವುದೇ ತಪ್ಪು ನಡೆಸುವುದಿಲ್ಲ ಎಂದು ಮಾತುಕೊಟ್ಟರೆ ನಿಮಗೆ ನಾನು ಸ್ವರ್ಗವನ್ನು ವಾಗ್ದಾನ ಮಾಡುತ್ತೇನೆ"" ನಾಲಗೆ ಮತ್ತು ಗುಪ್ತಾಂಗದ ಮೂಲಕ ತಪ್ಪು ಸಂಭವಿಸುವುದರಿಂದ ಹೇಗೆ ಅವುಗಳನ್ನು ಕಾಪಾಡಬಹುದು, ಅವುಗಳನ್ನು ಹೇಗೆ ಸಂಶುದ್ಧಗೊಳಿಸಬಹುದು ಎಂಬುದನ್ನು ಈ ಹದೀಸನ್ನು ವ್ಯಾಖ್ಯಾನಿಸಿ ಅಬುಲ್ಲಯ್ಸ್ ಸಮರ್ಖಂದೀ ರಹಿಮಹುಲ್ಲಾಹ್ ರಂತಹ ಮಹಾತ್ಮರು ಹೇಳುತ್ತಾರೆ. ತನ್ನ ನಾಲಗೆಯಿಂದ ಜೀವನದಲ್ಲಿ ಒಮ್ಮೆಯೂ ಸುಳ್ಳು ಹೇಳದಿರುವುದು, ಪರದೂಷಣೆ, ಪರನಿಂದನೆ ಮಾಡದಿರುವುದು, ಅನಗತ್ಯ ಚರ್ಚೆಗಳಲ್ಲಿ ಭಾಗಿಯಾಗದಿರುವುದು, ಕ್ರತಕ ಸುದ್ದಿಗಳನ್ನು ಸ್ರಷ್ಟಿ ಮಾಡಿ ಗೊಂದಲ ಉಂಟು ಮಾಡದಿರುವುದು. ನಾಲಗೆಯ ಮೂಲಕ ಅಲ್ಲಾಹನ ದ್ಸಿಕ್ರ್ ನಲ್ಲಿ ತಲ್ಲೀನನಾಗಿರುವುದು, ಕುರಾನ್ ಪಾರಾಯಣದ ಮೂಲಕ ಬದುಕನ್ನು ಧನ್ಯಗೊಳಿಸುವುದು, ಜ್ಞಾನ ಬೋಧನೆಯನ್ನು ಪಸರಿಸುವವನಾಗುವುದು. ಈ ರೀತಿಯಾಗಿರಬೇಕು ನಾಲಗೆಯನ್ನು ಸಂಶುದ್ಧಗೊಳಿಸುವುದು ಎಂದು ಮಹಾತ್ಮರು ಕಲಿಸಿ ಕೊಡುತ್ತಾರೆ. ಮುಂದುವರಿದು ಹಂಝ ಮದನಿ ಉಸ್ತಾದರು ಹ್ರದಯ ಶುದ್ಧೀಕರಣ ಹಾಗು ಹ್ರದಯದೊಂದಿಗೆ ಸಂಬಂಧವಿರುವ ಅಂಗಗಳ ಸಂಸ್ಕರಣೆ ಮಾಡುವುದು ಹೇಗೆ ಎಂದು ವಿವರಿಸಿ ಅಲ್ಲಾಹನ ಹಬೀಬ್ ಪ್ರವಾದಿ ಮುಹಮ್ಮದ್ ಮುಸ್ತಫ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ ಮೇಲೆ ಹೇಳಲ್ಪಡುವ ಸ್ವಲಾತಿನ ಮಹತ್ವವನ್ನು ವಿವರಿಸುತ್ತಾ ಹೇಳಿದರು. ಕಾವ್ಯಗಳಲ್ಲಿ ಸರಿಸಾಟಿಯಿಲ್ಲದ ಅತಿ ಮಹತ್ತರ ಕಾವ್ಯವಾದ ಪ್ರವಾದಿ ಮುಹಮ್ಮದ್ ಮುಸ್ತಫ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ ಪ್ರಶಂಸೆ, ಗುಣಗಾನಗಳನ್ನು ತಿಳಿಸುವ ಬುರ್ದಾ ಕಾವ್ಯವನ್ನು ವಿವರಿಸುತ್ತಾ ಮಹಾತ್ಮರು ಹೇಳುತ್ತಾರೆ. ಯಾರಾದರೂ ಪ್ರವಾದಿ ಮುಹಮ್ಮದ್ ಮುಸ್ತಫ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ ಮೇಲೆ ಸ್ವಲಾತ್ ಹೇಳಿದರೆ ಆ ಸ್ವಲಾತಿನ ಲೆಕ್ಕಾನುಸಾರ ಅಲ್ಲಾಹನು ಮಲಕುಗಳನ್ನು ಸ್ರಷ್ಟಿ ಮಾಡುತ್ತಾನೆ. ಆ ಮಲಕುಗಳು ಪ್ರವಾದಿ ಸ.ಅ ರವರ ಬಳಿ ತೆರಳಿ ಹೇಳುತ್ತಾರೆ. ಓ ಪ್ರವಾದಿವರ್ಯರೇ... ತಮ್ಮ ಮೇಲೆ ಇಂತಿಂತಹ ಊರಿನ ಒಬ್ಬನು ಸ್ವಲಾತ್ ಹೇಳಿದ್ದಾನೆ. ಆ ಸ್ವಲಾತಿನ ಕಾರಣದಿಂದ ಅಲ್ಲಾಹು ನನ್ನನ್ನು ಸ್ರಷ್ಟಿಸಿದ್ದಾನೆ. ಅಲ್ಲಾಹನ ಮಹಾತ್ಮರು ಹೇಳುತ್ತಾರೆ. ಮುಂದೆ ಆ ಮಲಕುಗಳ ಕಾಯಕ ಒಂದೇಯಾಗಿರುತ್ತದೆ. ಆ ಸ್ವಲಾತ್ ಹೇಳಿದ ಮನುಷ್ಯನಿಗಾಗಿ ಅಂತ್ಯ ದಿನದ ತನಕ ಆತನ ಪಾಪ ವಿಮೋಚನಿಗಾಗಿ ಬೇಡುವುದು.
    ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಭಾಗವಾಗಿ ಖತ್ಮುಲ್ ಕುರಾನ್ ಇಜ್ತಿಮಾ, ತಹ್ಲೀಲ್ ಮಜ್ಲಿಸ್ ಹಾಗು ಪ್ರಾರ್ಥನಾ ಸಂಗಮ ನಡೆಯಿತು.
ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ತೊಕ್ಕೋಟು ಸೆಕ್ಟರ್ ಅಧ್ಯಕ್ಷರಾದ ಇಲ್ಯಾಸ್ ಸಖಾಫಿ,   ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷರಾದ ಸಯ್ಯಿದ್ ಖುಬೈಬ್ ತಂಗಳ್, ಸೆಂಟರ್ ಕೋಶಾಧಿಕಾರಿ ಇಸಾಕ್ ಪೇಟೆ, ತೊಕ್ಕೋಟು ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಜಾಫರ್ ಅಳೇಕಲ, ಸಿರಾಜ್ ಉಸ್ತಾದ್ ಚಾಲಿಯಂ, ಶಮೀರ್ ಸೇವಂತಿಗುಡ್ಡೆ, ಎಸ್ ವೈ ಎಸ್ ಸೆಂಟರ್ ಜೊತೆ ಕಾರ್ಯದರ್ಶಿ ಇಲ್ಯಾಸ್ ಕೈಕೋ, ಸೆಂಟರ್ ಉಪಾಧ್ಯಕ್ಷ ಹೈದರ್ ಮುಕ್ಕಚ್ಚೇರಿ, ಸೆಂಟರ್ ಕಾರ್ಯಕಾರಿ ಸಮಿತಿ ಸದಸ್ಯ ಸಯೀದ್ ಮಂಚಿಲ, ಉಳ್ಳಾಲ ಸೆಕ್ಟರ್ ಕೋಶಾಧಿಕಾರಿ ಶಬೀರ್ ಪೇಟೆ ಹಾಗು ಇನ್ನಿತರ ಎಸ್ ವೈ ಎಸ್, ಎಸ್ಸೆಸ್ಸೆಫ್ ಗಣ್ಯರು ಉಪಸ್ಥಿತರಿದ್ದರು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಸ್ವಾಗತಿಸಿದರು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪ್ರಧಾನ ಕಾರ್ಯದರ್ಶಿ ಬಿ.ಜಿ ಹನೀಫ್ ಹಾಜಿ ಧನ್ಯವಾದಗೈದರು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗ ಚೇಯರ್ ಮಾನ್ ಅಲ್ತಾಫ್ ಕುಂಪಲ ಕಾರ್ಯಕ್ರಮ ನಿರೂಪಿಸಿದರು.

ವರದಿ : ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ

Comments

Popular posts from this blog

ಎಸ್ ವೈ ಎಸ್ ಉಳ್ಳಾಲ ಮಂಚಿಲ ಸರ್ಕಲ್ ರಚನೆ

ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.  ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ  ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...

ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್

ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್ ಉಳ್ಳಾಲದ ಅಕ್ಕರೆಕೆರೆಯ ಸಂಘಟನಾ ಕಛೇರಿ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು. ಈ ಸಭೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಮೌಲಿದ್ ಮಜ್ಲಿಸಿನ ನೇತ್ರತ್ವವನ್ನು ಅಬೂ ಮಫಾಝ್ ಮದನಿ ವಹಿಸಿದರು. ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಮಾತನಾಡಿ ವಾರಕ್ಕೊಮ್ಮೆ ಶುಕ್ರವಾರ ಸುಬಹ್ ನಮಾಝ್ ಬಳಿಕದ ಮಜ್ಲಿಸ್, ಮಾಸಿಕ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸ್ ಹಾಗು ಶಾಖೆಯ ಆಶ್ರಯದಲ್ಲಿ ನಡೆಯುವ ಇತರ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ರಬೇಕೆಂದು ತಿಳಿಸಿದರು. ನವಾಝ್ ಸಖಾಫಿ ಉಳ್ಳಾಲ ದುಆ ನೆರವೇರಿಸಿದರು. ಎಸ್ ವೈ ಎಸ್ ಶಾಖಾ ಕೋಶಾಧಿಕಾರಿ ಆರ್ ಕೆ ಮದನಿ  ಕಾರ್ಯಕ್ರಮ ನಿರ್ವಹಣೆ ಮಾಡಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಕೆ ಎಂ ಜೆ ಶಾಖಾಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಟೇಲ್ ಕಂಪೌಂಡ್ ಮತ್ತು ಶಾಖಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು.

ಕೂರತ್ ತಂಙಳ್ ಪ್ರಥಮ ಉರೂಸ್ ಪ್ರಚಾರ ಸಭೆ ಹಾಗು ಅನುಸ್ಮರಣಾ ಕಾರ್ಯಕ್ರಮ

ಉಳ್ಳಾಲ : ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ಸೆಸ್ಸೆಫ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ವತಿಯಿಂದ ಖುರ್ರತುಸ್ಸಾದಾತ್ ಸಯ್ಯಿದ್ ಕೂರತ್ ತಂಙಳ್ ರವರ ಪ್ರಥಮ ಉರೂಸ್ ಪ್ರಚಾರ ಸಭೆ ಹಾಗು ಅನುಸ್ಮರಣಾ ಕಾರ್ಯಕ್ರಮ ಉಳ್ಳಾಲ ಅಕ್ಕರೆಕೆರೆಯ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು.  ಕಾರ್ಯಕ್ರಮದ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಕೆ ಎಂ ಜೆ ಅಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕೋಟೆಕಾರ್ ಜುಮಾ ಮಸ್ಜಿದ್ ಮುದರ್ರಿಸ್ ಅಬ್ದುರ್ರಝ್ಝಾಖ್ ಸಅದಿ ಮದಕ ಅನುಸ್ಮರಣಾ ಭಾಷಣ ಮಾಡಿದರು. ಎಸ್ ವೈ ಎಸ್ ಉಳ್ಳಾಲ ಝೋನ್ ನಾಯಕ ಸಯ್ಯಿದ್ ಖುಬೈಬ್ ತಂಙಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಸೂರಃ ಯಾಸೀನ್ ಪಾರಾಯಣ, ತಹ್ಲೀಲ್ ಸಮರ್ಪಣೆ ನಡೆಸಲಾಯಿತು. ಎಸ್ಸೆಸ್ಸೆಫ್ ನಾಯಕ ಆಶಿಖ್ ಹಿಮಮಿ ಸಖಾಫಿ ನಶೀದಃ ಹಾಡಿದರು. ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಹ್ಮದ್ ಹಳೆಕೋಟೆ, ಕೋಶಾಧಿಕಾರಿ ಶರೀಫ್ ಮಂಚಿಲ, ಝೋನ್ ನಾಯಕರಾದ ಇಸಾಖ್ ಪೇಟೆ, ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಅಕ್ಕರೆಕೆರೆ, ಕೋಶಾಧಿಕಾರಿ ಆರ್ ಕೆ ಮದನಿ, ಕೆ ಎಂ ಜೆ  ಕೋಶಾಧಿಕಾರಿ ಅಬ್ದುಲ್ ರಹ್ಮಾನ್ ಅಕ್ಕರೆಕರೆ, ಮುಹಮ್ಮದ್ ಮದನಿ ಹಳೆಕೋಟೆ ಸಹಿತ ಸಂಘಟನಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು. ...