ಕರಾವಳಿ ಪ್ರದೇಶದ ಸುನ್ನೀ ಕಾರ್ಯ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ, ಸದಾ ಮುಸ್ಲಿಮ್ ಸಮುದಾಯದ ಪರ ಧ್ವನಿಯಾಗುತ್ತಿದ್ದ ಸಾಮಾಜಿಕ ಕಳಕಳಿಯ ಧುರೀಣ, ಸಮಾಜ ಸೇವಕ, ಹಿರಿಯ ಮೇಧಾವಿ ಹಾಜಿ ಹಮೀದ್ ಕಂದಕ್ ಇವರ ನಿಧನಕ್ಕೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಂತಾಪ ಸೂಚಿಸಿ ಇವರ ಹೆಸರಿನಲ್ಲಿ ಕುರಾನ್, ತಹ್ಲೀಲ್ ಸಮರ್ಪಿಸಿ ಪ್ರಾರ್ಥಿಸಲಾಯಿತು.
ಉಳ್ಳಾಲ ಮಾಸ್ತಿಕಟ್ಟೆ ಆಝಾದ್ ನಗರದ ಇಸ್ಲಾಮಿಕ್ ನಾಲೇಜ್ ಸೆಂಟರಿನಲ್ಲಿ ನಡೆದ ಸಂತಾಪ ಸಭೆ ಹಾಗು ತಹ್ಲೀಲ್ ಮಜ್ಲಿಸಿನ ನೇತ್ರತ್ವವನ್ನು ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್ ವಹಿಸಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಕೋಶಾಧಿಕಾರಿ ಬಿ.ಜಿ ಹನೀಫ್ ಹಾಜಿ ಉಳ್ಳಾಲ, ಸೆಂಟರ್ ಸಂಚಾಲಕರಾದ ಅಶ್ರಫ್ ಹಾಜಿ ಮುಕ್ಕಚ್ಚೇರಿ, ಎಸ್ ವೈ ಎಸ್ ಕೋಡಿ - ದೋಟ ಬ್ರಾಂಚ್ ಅಧ್ಯಕ್ಷರಾದ ಹಮೀದ್ ಮುಸ್ಲಿಯಾರ್ ಕೋಡಿ, ಎಸ್ ವೈ ಎಸ್ ಮೇಲಂಗಡಿ ಬ್ರಾಂಚ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ, ಸೆಂಟರ್ ಕೋಶಾಧಿಕಾರಿ ಇಸಾಕ್ ಪೇಟೆ, ಎಸ್ ವೈ ಎಸ್ ಸಾಂತ್ವನ ವಿಭಾಗದ ಚೇರಮಾನ್ ಅಲ್ತಾಫ್ ಕುಂಪಲ, ಸಾಂತ್ವನ ವಿಭಾಗದ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಹಳೆಕೋಟೆ, ಮುಹಮ್ಮದ್ ತೊಕ್ಕೋಟು, ಹೈದರ್ ಮುಕ್ಕಚ್ಚೇರಿ, ಇಲ್ಯಾಸ್ ಕೈಕೋ ಹಾಗು ಇನ್ನಿತರ ಗಣ್ಯರು ಭಾಗವಹಿಸಿದ್ದರು.
Comments