ಅಪಘಾತ ಒಂದರಲ್ಲಿ ಬಲ ಮೊಣಕಾಲಿನ ಕೆಳಗೆ ಸಂಪೂರ್ಣವಾಗಿ ಹುಡಿಯಾಗಿ ಶರೀರದ ಇತರ ಭಾಗಗಳ ಮಾಂಸವನ್ನು ತೆಗೆದು ಶಸ್ತ್ರಕ್ರಿಯೆಯ ಮೂಲಕ . ಗಾಯವಾದ ಕಾಲಿಗೆ ಜೋಡಿಸಿ ನೋವು ಅನುಭವಿಸುತ್ತಾ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತೋಡಾರು ಪರಿಸರದ ಬಡ ಕುಟುಂಬದ ಆಧಾರ ಸ್ತಂಭವಾಗಿದ್ದ ಓರ್ವ ಉಸ್ತಾದರನ್ನು ತೋಡಾರಿನ ಅವರ ನಿವಾಸಕ್ಕೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ಪ್ರತಿನಿಧಿಗಳು ಭೇಟಿ ನೀಡಿ ಹತ್ತು ಸಾವಿರ ರೂಪಾಯಿ ಧನ ಸಹಾಯ ನೀಡಿ ನೆರವಾದರು.
ಸಹ್ರದಯರು, ಪ್ರೀತಿಪಾತ್ರರು, ದಾನಿಗಳು ಪ್ರತ್ಯೇಕ ದುಆ ಮಾಡುವುದರೊಂದಿಗೆ ಸಹಾಯ ನಿರೀಕ್ಷೆಯಲ್ಲಿರುವ ಉಸ್ತಾದರಿಗೆ ಸಹಾಯಹಸ್ತ ಚಾಚಿದರೆ ಇಹಪರ ದ್ವಿಲೋಕದಲ್ಲೂ ಅದೊಂದು ಉತ್ತಮ ಪ್ರತಿಫಲಯುಕ್ತ ಸತ್ಕರ್ಮವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಅಲ್ಲಾಹು ಅನುಗ್ರಹಿಸಲಿ. ಆಮೀನ್.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ವಕ್ಫ್ ಸದಸ್ಯ ಹಾಗು ಎಸ್ ವೈ ಎಸ್ ಸಾಂತ್ವನ ವಿಭಾಗದ ಚೇರಮಾನ್ ಅಲ್ತಾಫ್ ಕುಂಪಲ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಂಚಾಲಕ ಅಶ್ರಫ್ ಹಾಜಿ ಬಳ್ಳಾರಿ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ನಾಯಕ ಸಯ್ಯಿದ್ ಖುಬೈಬ್ ತಂಗಳ್, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಉಪಸ್ಥಿತರಿದ್ದರು.
ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್
ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್ ಉಳ್ಳಾಲದ ಅಕ್ಕರೆಕೆರೆಯ ಸಂಘಟನಾ ಕಛೇರಿ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು. ಈ ಸಭೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಮೌಲಿದ್ ಮಜ್ಲಿಸಿನ ನೇತ್ರತ್ವವನ್ನು ಅಬೂ ಮಫಾಝ್ ಮದನಿ ವಹಿಸಿದರು. ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಮಾತನಾಡಿ ವಾರಕ್ಕೊಮ್ಮೆ ಶುಕ್ರವಾರ ಸುಬಹ್ ನಮಾಝ್ ಬಳಿಕದ ಮಜ್ಲಿಸ್, ಮಾಸಿಕ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸ್ ಹಾಗು ಶಾಖೆಯ ಆಶ್ರಯದಲ್ಲಿ ನಡೆಯುವ ಇತರ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ರಬೇಕೆಂದು ತಿಳಿಸಿದರು. ನವಾಝ್ ಸಖಾಫಿ ಉಳ್ಳಾಲ ದುಆ ನೆರವೇರಿಸಿದರು. ಎಸ್ ವೈ ಎಸ್ ಶಾಖಾ ಕೋಶಾಧಿಕಾರಿ ಆರ್ ಕೆ ಮದನಿ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಕೆ ಎಂ ಜೆ ಶಾಖಾಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಟೇಲ್ ಕಂಪೌಂಡ್ ಮತ್ತು ಶಾಖಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು.
Comments