ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ಆಶ್ರಯದಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗು ಕೊಡೆ ವಿತರಣಾ ಕಾರ್ಯಕ್ರಮ
ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ಆಶ್ರಯದಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗು ಕೊಡೆ ವಿತರಣಾ ಕಾರ್ಯಕ್ರಮ ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಅಧ್ಯಕ್ಷರಾದ ಮುಸ್ತಫ ಮಾಸ್ಟರ್ ಇವರ ಅಧ್ಯಕ್ಷತೆಯಲ್ಲಿ ಉಳ್ಳಾಲ ಮಾಸ್ತಿಕಟ್ಟೆಯ ಇಸ್ಲಾಮಿಕ್ ನಾಲೇಜ್ ಸೆಂಟರ್ ನಲ್ಲಿ ನಡೆಯಿತು.
ಆಝಾದ್ ನಗರ ಶಾಖಾಧ್ಯಕ್ಷರಾದ ಹಾಫಿಝ್ ಮುಈನ್ ರಝಾ ಅಮ್ಜದಿ ಉಳ್ಳಾಲ ದುವಾ ನೆರವೇರಿಸಿದರು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಾಂತ್ವನ ವಿಭಾಗದ ನಿರ್ದೇಶಕರಾದ ಅಲ್ತಾಫ್ ಕುಂಪಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಸ್ಸೆಸ್ಸೆಫ್ ದ.ಕ ಜಿಲ್ಲಾ ನಾಯಕರಾದ ಸಯ್ಯಿದ್ ಖುಬೈಬ್ ತಂಗಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಕೋಶಾಧಿಕಾರಿ ಮುಝಮ್ಮಿಲ್ ಕೋಟೆಪುರ ಸ್ವಾಗತಿಸಿದರು. ಎಸ್ ಬಿ ಎಸ್ ಉಳ್ಳಾಲ ಝೋನ್ ನಿರ್ದೇಶಕರಾದ ಮುಹಾಝ್ ಧನ್ಯವಾದಗೈದರು
Comments