Skip to main content

Posts

Showing posts from December, 2018

ಮುಸ್ಲಿಮರ ಭಾವನೆಯನ್ನು ಕೆರಳಿಸಿದ ಸುವರ್ಣ ನ್ಯೂಸ್  ಚಾನಲ್ ನಿರೂಪಕ ಅಜಿತ್ ಹನುಮಕ್ಕನವರ ವಿರುದ್ಧ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಖಂಡನೆ

ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿವಸಲ್ಲಮರನ್ನು ನಿಂದನೆ ಮಾಡಿ ಸಮಾಜದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗುವ ರೀತಿಯಲ್ಲಿ ಮಾಧ್ಯಮಕ್ಕೆ ಅಗೌರವ ತೋರಿ, ಮುಸ್ಲಿಮರ ಭಾವನೆಯನ್ನು ಕೆರಳಿಸಿದ ಸುವರ್ಣ ನ್ಯೂಸ್  ಚಾನಲ್ ನಿರೂಪಕ ಅಜಿತ್ ಹನುಮಕ್ಕನವರ ನಡೆ ತೀವ್ರ ಖಂಡನೀಯವಾದುದಾಗಿದೆ. ಅವರನ್ವು ಶೀಘ್ರವೇ ಬಂಧಿಸಬೇಕು ಹಾಗೂ ಸುವರ್ಣ ನ್ಯೂಸ್ ಚಾನಲನ್ನು ಬ್ಯಾನ್ ಮಾಡಬೇಕೆಂದು ಎಸ್ ವೈ ಎಸ್ ಉಳ್ಳಾಲ ಸೆಂಟರ್ ಒತ್ತಾಯಿಸಿದೆ. ಕಾರ್ಯಕ್ರಮದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್, ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ, ಎಸ್ ವೈ ಎಸ್ ದ.ಕ ಜಿಲ್ಲಾ ಕೋಶಾಧಿಕಾರಿ ಬಿ.ಜಿ ಹನೀಫ್ ಹಾಜಿ,  ಎಸ್ ವೈ ಎಸ್ ಉಳ್ಳಾಲ ಸೆಂಟರ್ ರಿಲೀಫ್ ಚೇರಮಾನ್ ಅಲ್ತಾಫ್ ಕುಂಪಲ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಹಾಗು ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

ಎಸ್ ವೈ ಎಸ್ ಅಳೇಕಲ, ಮಂಚಿಲ, ಮಾರ್ಗತಲೆ ಬ್ರಾಂಚ್ ವತಿಯಿಂದ ಬ್ರಹತ್ ಸುನ್ನೀ ಆದರ್ಶ ಸಂಗಮ 

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧೀನದ ಎಸ್ ವೈ ಎಸ್ ಅಳೇಕಲ, ಮಂಚಿಲ, ಮಾರ್ಗತಲೆ ಬ್ರಾಂಚ್ ವತಿಯಿಂದ ಬ್ರಹತ್ ಸುನ್ನೀ ಆದರ್ಶ ಸಂಗಮ ಅಳೇಕಲದ ಜೂನಿಯರ್ ಕಾಲೇಜು ಸಮೀಪದ ಮದನಿ ಮೈದಾನದಲ್ಲಿ ನಡೆಯಿತು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ಅಧ್ಯಕ್ಷತೆ ವಹಿಸಿದರು. ಅಳೇಕಲ ಜುಮಾ ಮಸೀದಿ ಖತೀಬರಾದ ಅಲ್ ಹಾಜ್ ಅಬೂ ಝಿಯಾದ್ ಮದನಿ ಪಟ್ಟಾಂಬಿ ಉಸ್ತಾದರ ದುಆದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬದ್ರಿಯ ಜುಮಾ ಮಸೀದಿ ಸುಂದರಿಬಾಗ್ ಖತೀಬರಾದ ಶರೀಫ್ ಸಅದಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಸಿದ್ಧ ವಾಗ್ಮಿ ಅಬ್ದುಲ್ ವಹಾಬ್ ಸಖಾಫಿ ಮಂಬಾಡ್ ಮುಖ್ಯ ಪ್ರಭಾಷಣ ಮಾಡಿದರು. ಪ್ರಸ್ತುತ ಆದರ್ಶ ಸಂಗಮ ಕಾರ್ಯಕ್ರಮದಲ್ಲಿ ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ ಇದರ ಗೌರವಾಧ್ಯಕ್ಷರಾದ ಯು ಎಸ್ ಹಂಝ ಹಾಜಿ, ಎಸ್ಸೆಸ್ಸೆಫ್ ದ.ಕ ಜಿಲ್ಲಾ ನಾಯಕ ಸಯ್ಯಿದ್ ಖುಬೈಬ್ ತಂಗಲ್, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ, ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಉಪಾಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ, ಸಯ್ಯಿದ್ ಮದನಿ ಸುನ್ನೀ ಸೆಂಟ್ರಲ್ ಕಮಿಟಿ ಅಧ್ಯಕ್ಷರಾದ ಅಬೂ ಅನಸ್ ಜಮಾಲ್ ಉಸ್ತಾದ್ ಹಾಗು ಇನ್ನಿತರ ಉಲಮಾ ಉಮರಾ...

ಎಸ್ ವೈ ಎಸ್ ಪಟ್ಲ ಬ್ರಾಂಚ್ ಪಟ್ಲದಲ್ಲಿ ಅಸ್ತಿತ್ವಕ್ಕೆ 

ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧೀನದ ಹನ್ನೊಂದನೇ ನೂತನ ಬ್ರಾಂಚಾಗಿ ಎಸ್ ವೈ ಎಸ್ ಪಟ್ಲ ಬ್ರಾಂಚ್ ಪಟ್ಲದಲ್ಲಿ ಅಸ್ತಿತ್ವಕ್ಕೆ ತರಲಾಯಿತು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಪಟ್ಲ ತಖ್ವಾ ಜುಮಾ ಮಸೀದಿ ಖತೀಬರಾದ ಮೋಙಂ ಫೈಝಿ ಉದ್ಘಾಟಿಸಿದರು. 2019 ನೇ ಸಾಲಿನ ಎಸ್ ವೈ ಎಸ್ ಪಟ್ಲ ಬ್ರಾಂಚಿಗೆ ನೂತನ ಸಮಿತಿಯನ್ನು ಆಯ್ಕೆಮಾಡಲಾಯಿತು. ಅಧ್ಯಕ್ಷರಾಗಿ ಶರೀಫ್ ಅಮ್ಜದಿ ಪಟ್ಲ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಪಟ್ಲ, ಕೋಶಾಧಿಕಾರಿಯಾಗಿ ಯೂಸುಫ್, ಉಪಾಧ್ಯಕ್ಷರಾಗಿ ಮುಸ್ತಫ ಫ್ರೂಟ್ಸ್, ಜೊತೆ ಕಾರ್ಯದರ್ಶಿಯಾಗಿ ಯೂಸುಫ್ ರಿಕ್ಷಾ ಇವರುಗಳನ್ವು ಆರಿಸಲಾಯಿತು. ಪ್ರಸ್ತುತ ಕಾರ್ಯಕ್ರಮದಲ್ಲಿ ಸೆಂಟರ್ ಮೀಡಿಯ ವಕ್ತಾರ ನವಾಝ್ ಸಖಾಫಿ ಉಳ್ಳಾಲ ಹಾಗು ಪಟ್ಲ ಬ್ರಾಂಚ್ ನೂತನ ಉಪಾಧ್ಯಕ್ಷರಾದ ಮುಸ್ತಫ ಫ್ರೂಟ್ಸ್ ಶುಭಾಶಂಶೆಗಶನ್ನು ತಿಳಿಸಿದರು. ಸೆಂಟರ್ ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

KCF, SSF, SYS ಹಮ್ಮಿಕೊಂಡಿರುವ Connect 2018 ಸಾಮುದಾಯಿಕ ಸಮ್ಮಿಲನದ ಪೋಸ್ಟರನ್ನು SYS ಉಳ್ಳಾಲ ಸೆಂಟರ್ ಮತ್ತು ಇದರ ಎಲ್ಲಾ ಬ್ರಾಂಚುಗಳ ವತಿಯಿಂದ ಪ್ರದರ್ಶಿಸುತ್ತಿರುವುದು.

KCF, SSF, SYS ಹಮ್ಮಿಕೊಂಡಿರುವ Connect 2018 ಸಾಮುದಾಯಿಕ ಸಮ್ಮಿಲನದ ಪೋಸ್ಟರನ್ನು SYS ಉಳ್ಳಾಲ ಸೆಂಟರ್ ಮತ್ತು ಇದರ ಎಲ್ಲಾ ಬ್ರಾಂಚುಗಳ ವತಿಯಿಂದ ಪ್ರದರ್ಶಿಸುತ್ತಿರುವುದು.