ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಉಳ್ಳಾಲ ಮಾಸ್ತಿಕಟ್ಟೆಯ ಹಾಶಿಂ ಟವರ್ ನಲ್ಲಿ ಜರುಗಿತು.
ಚುನಾವಣಾ ವೀಕ್ಷಕರಾಗಿ ಭಾಗವಹಿಸಿದ ದ.ಕ ಜಿಲ್ಲಾ ಎಸ್ ವೈ ಎಸ್ ಸದಸ್ಯರು ಮತ್ತು ತಾಜುಲ್ ಉಲಮಾ ವುಮೆನ್ಸ್ ಶರೀಅತ್ ಕಾಲೇಜು ದೇರಳಕಟ್ಟೆ ಇದರ ಮ್ಯಾನೇಜರಾದ ಸಾಮಣಿಗೆ ಮದನಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ ಉಳ್ಳಾಲ ವಾರ್ಷಿಕ ವರದಿ ಹಾಗು ಲೆಕ್ಕಪತ್ರ ಮಂಡಿಸಿದರು. ದ.ಕ ಜಿಲ್ಲಾ ಎಸ್ ವೈ ಎಸ್ ಚುನಾವಣಾ ಸಮಿತಿ ನಾಯಕರಾದ ಎಸ್ ವೈ ಎಸ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಹಾಗು ಎಸ್ ವೈ ಎಸ್ ದ.ಕ ಜಿಲ್ಲಾ ಎಸ್ ವೈ ಎಸ್ ಕೋಶಾಧಿಕಾರಿ ಬಿ.ಜಿ ಹನೀಫ್ ಹಾಜಿರವರ ನೇತ್ರತ್ವದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಗೌರವಾಧ್ಯಕ್ಷರಾಗಿ ಸಯ್ಯಿದ್ ಜಲಾಲ್ ತಂಗಳ್ ಅಳೇಕಲ, ಅಧ್ಯಕ್ಷರಾಗಿ ಬಶೀರ್ ಸಖಾಫಿ ಉಳ್ಳಾಲ, ಉಪಾಧ್ಯಕ್ಷರಾಗಿ ಹಸನ್ ಮುಬಾರಕ್ ಸಖಾಫಿ ತೊಕ್ಕೋಟು, ಪ್ರಧಾನ ಕಾರ್ಯದರ್ಶಿಯಾಗಿ ಇಸಾಕ್ ಪೇಟೆ, ಕೋಶಾಧಿಕಾರಿಯಾಗಿ ಅಬ್ದುಸ್ಸಮದ್ ಹಳೆಕೋಟೆ, ಶಿಕ್ಷಣ ಹಾಗು ದಅವಾ ಕಾರ್ಯದರ್ಶಿಯಾಗಿ ಶಿಹಾಬುದ್ದೀನ್ ಸಖಾಫಿ ಉಳ್ಳಾಲ, ಸಂಘಟನಾ ಕಾರ್ಯದರ್ಶಿಯಾಗಿ ಮನ್ಸೂರ್ ಹಳೆಕೋಟೆ, ಸಾಂತ್ವನ ಹಾಗು ಇಸಾಬಃ ಕಾರ್ಯದರ್ಶಿಯಾಗಿ ಅಲ್ತಾಫ್ ಕುಂಪಲ, ಕಾರ್ಯಕ್ರಮ ನಿರ್ವಹಣಾ ಕಾರ್ಯದರ್ಶಿಯಾಗಿ ಇಲ್ಯಾಸ್ ಕೈಕೋ, ಮಾಧ್ಯಮ ಕಾರ್ಯದರ್ಶಿಯಾಗಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ, ಟೀಂ ಇಸಾಬಃ ಸೆಂಟರ್ ಅಮೀರಾಗಿ ಮುಹಮ್ಮದ್ ಕೈಕೋ ಹಾಗು ಇಪ್ಪತ್ತು ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು. ಜಿಲ್ಲಾ ಕೌನ್ಸಿಲರುಗಳಾಗಿ ಇಪ್ಪತ್ತೆರಡು ಮಂದಿಯನ್ನು ಆರಿಸಲಾಯಿತು.
ನವೆಂಬರ್ ಏಳರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯುವ ಹುಬ್ಬುರ್ರಸೂಲ್ ಕಾಂಫರೆನ್ಸಿನ ಕರಪತ್ರವನ್ನು ಪ್ರಸ್ತುತ ಸಭೆಯಲ್ಲಿ ಪ್ರದರ್ಶಿಸಲಾಯಿತು.
ಈ ಸಂದರ್ಭದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧೀನದ ಬ್ರಾಂಚುಗಳ ಸಮಿತಿ ಸದಸ್ಯರು, ಸೆಂಟರ್ ಕೌನ್ಸಿಲರುಗಳು ಉಪಸ್ಥಿತರಿದ್ದರು.









Comments