ಎಸ್ ವೈ ಎಸ್ ಉಳ್ಳಾಲ ಸೆಂಟರ್ ವತಿಯಿಂದ 53 ಬಡ ಕುಟುಂಬಗಳಿಗೆ ಮೊದಲ ಹಂತದ ನಗದು ವಿತರಣೆ
"ಕೋವಿಡ್ 19" ಎಂಬ ಜಾಗತಿಕ ಕಿಲ್ಲರ್ ವೈರಾಣು ಹರಡುವುದನ್ನು ತಡೆಗಟ್ಟಲು ಘೋಷಿಸಲಾದ ರಾಷ್ಟ್ರೀಯ ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾದ ಜನರಿಗೆ ಜಾತಿ, ಧರ್ಮ ವ್ಯತ್ಯಾಸವಿಲ್ಲದೆ 250 ಕ್ಕೂ ಮಿಕ್ಕ ಕುಟುಂಬಗಳಿಗೆ ರೇಷನ್ ಕಿಟ್ ತಲುಪಿಸುವ ಮೂಲಕ ಮಾದರೀ ಸೇವೆ ನೀಡಿದ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಇದೀಗ ಉಳ್ಳಾಲ ವ್ಯಾಪ್ತಿಯ 53 ಅರ್ಹ ಕುಟುಂಬಕ್ಕೆ ಮೊದಲ ಹಂತದ ನಗದು ಸಹಾಯ ವಿತರಿಸಿತು.
ಎಸ್ ವೈ ಎಸ್ ರಾಜ್ಯ ಸದಸ್ಯರೂ, SYS ಉಳ್ಳಾಲ ಸೆಂಟರ್ ನಾಯಕರೂ ಆದ ಬಿಜಿ ಹನೀಫ್ ಹಾಜಿ ಉಳ್ಳಾಲ, ಸೆಂಟರ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ, ಸೆಂಟರ್ ಪ್ರಧಾನ ಕಾರ್ಯದರ್ಶಿ ಇಸಾಕ್ ಪೇಟೆ, ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಉಪಾಧ್ಯಕ್ಷರಾದ ಅಬ್ದುಲ್ ರಹ್ಮಾನ್ ಅಕ್ಕರೆಕೆರೆ, ಸೆಂಟರ್ ಕಾರ್ಯಕ್ರಮ ನಿರ್ವಹಣಾ ಕಾರ್ಯದರ್ಶಿ ಇಲ್ಯಾಸ್ ಕೈಕೋ, ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ ಧನ ಸಹಾಯ ವಿತರಣಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಗದು ವಿತರಣೆಗೆ ತನು, ಮನ, ಧನಗಳಿಂದ ಸಹಕರಿಸಿದ ಸರ್ವರಿಗೂ ಅಲ್ಲಾಹನು ದ್ವಿಲೋಕದಲ್ಲಿ ಯಶಸ್ಸನ್ನು ನೀಡಲಿ. ಆಮೀನ್
✍ ನವಾಝ್ ಸಖಾಫಿ ಅಕ್ಕರೆಕೆರೆ ಉಳ್ಳಾಲ



Comments