ಎಸ್ ವೈ ಎಸ್ ಉಳ್ಳಾಲ ಸೆಂಟರ್ ವತಿಯಿಂದ ಬಡ ಕುಟುಂಬಗಳಿಗೆ ದ್ವಿತೀಯ ಹಂತದ ನಗದು ವಿತರಣೆ.
ಕಿಡ್ನಿ ಹಾಗು ಬ್ರೈನ್ ಟ್ಯೂಮರ್ ರೋಗದಿಂದ ಬಳಲುತ್ತಿದ್ದ ಎರಡು ರೋಗಿಗಳ ಚಿಕಿತ್ಸೆಗೆ ಧನ ಸಹಾಯ.
"ಕೋವಿಡ್ 19" ಎಂಬ ಜಾಗತಿಕ ಕಿಲ್ಲರ್ ವೈರಾಣು ಹರಡುವುದನ್ನು ತಡೆಗಟ್ಟಲು ಘೋಷಿಸಲಾದ ರಾಷ್ಟ್ರೀಯ ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾದ ಜನರಿಗೆ ಜಾತಿ, ಧರ್ಮ ವ್ಯತ್ಯಾಸವಿಲ್ಲದೆ 250 ಕ್ಕೂ ಮಿಕ್ಕ ಕುಟುಂಬಗಳಿಗೆ ರೇಷನ್ ಕಿಟ್ ತಲುಪಿಸುವ ಮೂಲಕ ಮಾದರೀ ಸೇವೆ ನೀಡಿದ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮೊದಲ ಹಂತದಲ್ಲಿ ಉಳ್ಳಾಲ ವ್ಯಾಪ್ತಿಯ 53 ಅರ್ಹ ಕುಟುಂಬಕ್ಕೆ ನಗದು ಸಹಾಯ ವಿತರಿಸಿತ್ತು. ಇದೀಗ ದ್ವಿತೀಯ ಹಂತದಲ್ಲಿ 30 ಅರ್ಹ ಬಡ ಕುಟುಂಬಕ್ಕೆ ನಗದು ಹಸ್ತಾಂತರ ಹಾಗು ಕಿಡ್ನಿ ಹಾಗು ಬ್ರೈನ್ ಟ್ಯೂಮರ್ ರೋಗದಿಂದ ಬಳಲುತ್ತಿದ್ದ ಎರಡು ರೋಗಿಗಳ ಚಿಕಿತ್ಸೆಗೆ ಧನ ಸಹಾಯ ವಿತರಿಸಲಾಯಿತು. ಉಮರಾ ನಾಯಕರಾದ ಮಿಹ್ರಾಜ್ ಉಮರ್ ಹಾಜಿ ಅತಿಥಿಯಾಗಿ ಭಾಗವಹಿಸಿದ್ದರು.
ಎಸ್ ವೈ ಎಸ್ ರಾಜ್ಯ ಸದಸ್ಯರೂ, SYS ಉಳ್ಳಾಲ ಸೆಂಟರ್ ನಾಯಕರೂ ಆದ ಬಿಜಿ ಹನೀಫ್ ಹಾಜಿ ಉಳ್ಳಾಲ, ಸೆಂಟರ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ, ಸೆಂಟರ್ ಗೌರವಾಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್, ಸೆಂಟರ್ ಪ್ರಧಾನ ಕಾರ್ಯದರ್ಶಿ ಇಸಾಕ್ ಪೇಟೆ, ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಉಪಾಧ್ಯಕ್ಷರಾದ ಅಬ್ದುಲ್ ರಹ್ಮಾನ್ ಅಕ್ಕರೆಕೆರೆ, ಸೆಂಟರ್ ಕಾರ್ಯಕ್ರಮ ನಿರ್ವಹಣಾ ಕಾರ್ಯದರ್ಶಿ ಇಲ್ಯಾಸ್ ಕೈಕೋ ಧನ ಸಹಾಯ ವಿತರಣಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
✍ ನವಾಝ್ ಸಖಾಫಿ ಅಕ್ಕರೆಕೆರೆ ಉಳ್ಳಾಲ



Comments