ಪ್ರವಾದಿಯ ಹಾದಿಯಲ್ಲಿ ಗೆಲುವಿದೆ ಎಂಬ ಸಂದೇಶದೊಂದಿಗೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಹಮ್ಮಿಕೊಂಡ ಮೌಲಿದ್ ಮಜ್ಲಿಸ್ ಕಾರ್ಯಕ್ರಮ
ಪ್ರವಾದಿಯ ಹಾದಿಯಲ್ಲಿ ಗೆಲುವಿದೆ ಎಂಬ ಸಂದೇಶದೊಂದಿಗೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಹಮ್ಮಿಕೊಂಡ ಮೌಲಿದ್ ಮಜ್ಲಿಸ್ ಕಾರ್ಯಕ್ರಮ ಉಳ್ಳಾಲ ಆಝಾದ್ ನಗರದ ಇಸ್ಲಾಮಿಕ್ ನೋಲೇಜ್ ಸೆಂಟರಿನಲ್ಲಿ ನಡೆಯಿತು. ಸೆಂಟರ್ ಗೌರವಾಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್ ಅಳೇಕಲ ಮಜ್ಲಿಸಿನ ನೇತ್ರತ್ವವನ್ನು ವಹಿಸಿದರು. ಸೆಂಟರ್ ದಅವಾ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ ಉಳ್ಳಾಲ ತರಗತಿ ನಡೆಸಿದರು. ಸೆಂಟರ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಮತ್ತು ಸೆಂಟರ್ ಮಾಜಿ ಅಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಎಸ್ ವೈ ಎಸ್ ರಾಜ್ಯ ನಾಯಕರಾದ ಬಿ.ಜಿ ಹನೀಫ್ ಹಾಜಿ ಉಳ್ಳಾಲ, ಸೆಂಟರ್ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಹಳೆಕೋಟೆ, ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ, ಸೆಂಟರ್ ಕೋಶಾಧಿಕಾರಿ ಅಬ್ದುಸ್ಸಮದ್ ಹಳೆಕೋಟೆ, ಸೆಂಟರ್ ಕಾರ್ಯಕ್ರಮ ನಿರ್ವಹಣಾ ಕಾರ್ಯದರ್ಶಿ ಇಲ್ಯಾಸ್ ಕೈಕೋ, ಕೋಡಿ ಕೋಟೆಪುರ ಬ್ರಾಂಚ್ ನಾಯಕರಾದ ಶರೀಫ್ ಮದನಿ ಕೋಟೆಪುರ, ಸುಂದರಭಾಗ್ ಬ್ರಾಂಚ್ ನಾಯಕರಾದ ಯೂಸುಫ್ ಮದನಿ, ಸೆಂಟರ್ ಕಾರ್ಯಕಾರಿ ಸಮಿತಿ ಸದಸ್ಯರು, ಬ್ರಾಂಚ್ ಪದಾಧಿಕಾರಿಗಳು ಭಾಗವಹಿಸಿದರು.