ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧೀನದ ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ Count - 20 ವಾರ್ಷಿಕ ಮಹಾಸಭೆ ಇತ್ತೀಚೆಗೆ ಬ್ರಾಂಚ್ ಅಧ್ಯಕ್ಷರಾದ ಮುಹಮ್ಮದ್ ಮದನಿ ಹಳೆಕೋಟೆಯವರ ಅಧ್ಯಕ್ಷತೆಯಲ್ಲಿ ಹಳೆಕೋಟೆಯ ಶಬೀರ್ ಪ್ಯಾಲೇಸಿನಲ್ಲಿ ನಡೆಯಿತು. ಎಸ್ ವೈ ಎಸ್ ಮುಡಿಪು ಸೆಂಟರ್ ನಾಯಕರಾದ ಆರ್ ಕೆ ಮದನಿ ಅಮ್ಮೆಂಬಳ ಕಾರ್ಯಕ್ರಮ ಉದ್ಘಾಟಿಸಿದರು. ಬ್ರಾಂಚ್ ಪ್ರ ಕಾರ್ಯದರ್ಶಿ ಖಾಲಿದ್ ಅಕ್ಕರೆಕೆರೆ ಸ್ವಾಗತಿಸಿದರು. ಬ್ರಾಂಚ್ ಕೋಶಾಧಿಕಾರಿ ನವಾಝ್ ಸಖಾಫಿ ಉಳ್ಳಾಲ ವಾರ್ಷಿಕ ವರದಿ ಹಾಗು ಲೆಕ್ಕಪತ್ರ ಮಂಡಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸೆಂಟರ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಎಸ್ ವೈ ಎಸ್ ಸಂಘಟನೆಯ ಮಹತ್ವದ ಕುರಿತು ತಿಳಿಸಿದರು. ಸಭಾ ವೀಕ್ಷಕರಾಗಿ ಸೆಂಟರ್ ಕೋಶಾಧಿಕಾರಿ ಅಬ್ದುಸ್ಸಮದ್ ಹಳೆಕೋಟೆ ಆಗಮಿಸಿದ್ದರು. ಸಭೆಯಲ್ಲಿ ಮುಂದಿನ ಯೋಜನೆಗಳ ಬಗ್ಗೆ ಚರ್ಚೆ ಮಂಡಿಸಲಾಯಿತು. ಕೊನೆಯಲ್ಲಿ ಇತ್ತೀಚೆಗೆ ಲೀಗ್ ಗೂಂಡಾಗಳಿಂದ ಹತ್ಯೆಯಾದ ಅಬ್ದುರ್ರಹ್ಮಾನ್ ಔಫ್ ಮತ್ತು ಮರಣಹೊಂದಿದ ಕುಟುಂಬಿಕರು, ಸ್ನೇಹಿತರು, ಸಂಘಟನಾ ಕಾರ್ಯಕರ್ತರ ಹೆಸರಿನಲ್ಲಿ ಮತ್ತು ರೋಗಗಳಿಂದ ಬಳಲುತ್ತಿರುವವರ ರೋಗ ಶೀಘ್ರ ಶಮನವಾಗಲು ಕುರಾನ್ ಓದಿ, ನಾರಿಯತುಸ್ಸಲಾತ್ ಹೇಳಿ ಪ್ರಾರ್ಥಿಸಲಾಯಿತು. ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚಿನ ನಾಯಕರು, ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬ್ರಾಂಚ್ ದಅವಾ ಕಾರ್ಯದರ್ಶಿ ಮನ್ಸೂರ್ ಹಳೆಕೋ...
ಇದು SYS ಉಳ್ಳಾಲ ಸೆಂಟರಿನ ಅಧಿಕ್ರತ ಬ್ಲಾಗ್ ಆಗಿದೆ.ಇದರಲ್ಲಿ SYS ಉಳ್ಳಾಲ ಸೆಂಟರ್ ಮತ್ತು ಇದರ ಅಧೀನ ಬ್ರಾಂಚುಗಳ ಕಾರ್ಯಕ್ರಮಗಳು, ವರದಿಗಳು ಹಾಗೂ ಫೋಟೋಸ್ ಗಳು ಲಭ್ಯವಾಗಲಿದೆ