Skip to main content

ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ದ್ವಿ ವಾರ್ಷಿಕ ಮಹಾಸಭೆ ಮತ್ತು ಮಹ್ಳರತುಲ್ ಬದ್ರಿಯ್ಯಃ ಆಧ್ಯಾತ್ಮಿಕ ಸಂಗಮ

 

ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ದ್ವಿ ವಾರ್ಷಿಕ ಮಹಾಸಭೆ ಮತ್ತು ಮಹ್ಳರತುಲ್ ಬದ್ರಿಯ್ಯಃ ಆಧ್ಯಾತ್ಮಿಕ ಸಂಗಮ ಹಳೆಕೋಟೆಯ ಹಂಝ ಪ್ಯಾಲೇಸಿನಲ್ಲಿ ನಡೆಯಿತು.

ಅಬೂ ಮಫಾಝ್ ಮದನಿ ಹಳೆಕೋಟೆ ಅಧ್ಯಕ್ಷತೆ ವಹಿಸಿದರು. ಅಬ್ಬಾಸ್ ಮದನಿ ಉಳ್ಳಾಲ ಮಜ್ಲಿಸಿಗೆ ನೇತ್ರತ್ವ ನೀಡಿ ದುಆಗೈದರು. ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಖಾಲಿದ್ ಸ್ವಾಗತಿಸಿದರು. ಆರ್ ಕೆ ಮದನಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿದರು. ಬಳಿಕ ವರದಿ ಹಾಗು ಲೆಕ್ಕಪತ್ರ ಮಂಡಿಸಿ, ಸಭೆಯ ಅಂಗೀಕಾರ ಪಡೆಯಲಾಯಿತು. ಎರಡು ವರ್ಷಗಳ ಅವಧಿಯಲ್ಲಿ ಬ್ರಾಂಚ್ ಮಾಡಿದ ಸಾಮಾಜಿಕ, ಧಾರ್ಮಿಕ, ಆಧ್ಯಾತ್ಮಿಕ ಕಾರ್ಯ ಚಟುವಟಿಕೆಯ ಮಾಹಿತಿಯನ್ನು ಅಬೂ ಮಫಾಝ್ ಮದನಿ ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು.


ಚುನಾವಣಾ ವೀಕ್ಷಕರಾಗಿ ಆಗಮಿಸಿದ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಎಸ್ ವೈ ಎಸ್ ಸಂಘಟನೆಯ ಅನಿವಾರ್ಯತೆಯ ಕುರಿತು ಮಾತನಾಡಿದ ಬಳಿಕ ಹಾಲಿ ಸಮಿತಿಯನ್ನು ವಿಸರ್ಜಿಸಿ, ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದರು.

ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಸಮಿತಿಯ ನೂತನಾಧ್ಯಕ್ಷರಾಗಿ ಅಬೂಬಕರ್ ಸಿದ್ದೀಕ್ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ನವಾಝ್ ಸಖಾಫಿ ಉಳ್ಳಾಲ, ಕೋಶಾಧಿಕಾರಿಯಾಗಿ ಶಬೀರ್ ಹಳೆಕೋಟೆ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ಮನ್ಸೂರ್ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಅಶ್ರಫ್ ಝುಹ್ರಿ, ಇಸಾಬಃ ಕಾರ್ಯದರ್ಶಿಯಾಗಿ ಖಾಲಿದ್ ಅಕ್ಕರೆಕೆರೆ, ಸಂಘಟನಾ ಕಾರ್ಯದರ್ಶಿಯಾಗಿ ಸತ್ತಾರ್ ಅಕ್ಕರೆಕೆರೆ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಅಬೂಮಫಾಝ್ ಮದನಿ ಹಳೆಕೋಟೆ, ಹಸನ್ ಬಾವ ಹಾಜಿ ಅಕ್ಕರೆಕೆರೆ, ಹಂಝ ಹಳೆಕೋಟೆ, ಅಬ್ದುಲ್ ರಹ್ಮಾನ್ ಅಕ್ಕರೆಕೆರೆ, ಅಬ್ದುಲ್ ಅಝೀಝ್ ಮುಸ್ಲಿಯಾರ್, ಇಕ್ಬಾಲ್ ಅಕ್ಕರೆಕೆರೆ, ಕುತ್ತಾರ್ ಮುಹಮ್ಮದ್ ಅಬೂಬಕರ್, ಯೂನುಸ್, ಫಾರೂಖ್ ಅಕ್ಕರೆಕೆರೆ, ಖಲೀಲ್ ಹಳೆಕೋಟೆ ಆಯ್ಕೆಯಾದರು.

ಸೆಂಟರ್ ಕೌನ್ಸಿಲರುಗಳಾಗಿ ಅಬೂಬಕರ್ ಸಿದ್ದೀಕ್ ಅಕ್ಕರೆಕೆರೆ, ನವಾಝ್ ಸಖಾಫಿ ಉಳ್ಳಾಲ, ಶಬೀರ್ ಹಳೆಕೋಟೆ, ಮನ್ಸೂರ್ ಹಳೆಕೋಟೆ, ಅಬೂಮಫಾಝ್ ಮದನಿ ಹಳೆಕೋಟೆ, ಅಬ್ದುಲ್ ರಹ್ಮಾನ್ ಅಕ್ಕರೆಕೆರೆ, ಖಾಲಿದ್ ಅಕ್ಕರೆಕೆರೆ ಆಯ್ಕೆಯಾದರು.


ಬಳಿಕ ನೂತನಾಧ್ಯಕ್ಷರಾದ ಅಬೂಬಕರ್ ಸಿದ್ದೀಕ್ ಅಕ್ಕರೆಕೆರೆ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತು ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸೆಂಟರ್ ಪ್ರಧಾನ ಕಾರ್ಯದರ್ಶಿ ಇಸಾಕ್ ಪೇಟೆ ಶುಭ ಹಾರೈಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಬ್ರಾಂಚಿನ ಸದಸ್ಯರುಗಳು ಉಪಸ್ಥಿತರಿದ್ದರು. ಕೊನೆಯಲ್ಲಿ ನೂತನ ಪ್ರಧಾನ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ ಧನ್ಯವಾದಗೈದರು.









Comments

Popular posts from this blog

ಎಸ್ ವೈ ಎಸ್ ಉಳ್ಳಾಲ ಮಂಚಿಲ ಸರ್ಕಲ್ ರಚನೆ

ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.  ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ  ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...

ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್

ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್ ಉಳ್ಳಾಲದ ಅಕ್ಕರೆಕೆರೆಯ ಸಂಘಟನಾ ಕಛೇರಿ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು. ಈ ಸಭೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಮೌಲಿದ್ ಮಜ್ಲಿಸಿನ ನೇತ್ರತ್ವವನ್ನು ಅಬೂ ಮಫಾಝ್ ಮದನಿ ವಹಿಸಿದರು. ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಮಾತನಾಡಿ ವಾರಕ್ಕೊಮ್ಮೆ ಶುಕ್ರವಾರ ಸುಬಹ್ ನಮಾಝ್ ಬಳಿಕದ ಮಜ್ಲಿಸ್, ಮಾಸಿಕ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸ್ ಹಾಗು ಶಾಖೆಯ ಆಶ್ರಯದಲ್ಲಿ ನಡೆಯುವ ಇತರ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ರಬೇಕೆಂದು ತಿಳಿಸಿದರು. ನವಾಝ್ ಸಖಾಫಿ ಉಳ್ಳಾಲ ದುಆ ನೆರವೇರಿಸಿದರು. ಎಸ್ ವೈ ಎಸ್ ಶಾಖಾ ಕೋಶಾಧಿಕಾರಿ ಆರ್ ಕೆ ಮದನಿ  ಕಾರ್ಯಕ್ರಮ ನಿರ್ವಹಣೆ ಮಾಡಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಕೆ ಎಂ ಜೆ ಶಾಖಾಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಟೇಲ್ ಕಂಪೌಂಡ್ ಮತ್ತು ಶಾಖಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು.

ಕೂರತ್ ತಂಙಳ್ ಪ್ರಥಮ ಉರೂಸ್ ಪ್ರಚಾರ ಸಭೆ ಹಾಗು ಅನುಸ್ಮರಣಾ ಕಾರ್ಯಕ್ರಮ

ಉಳ್ಳಾಲ : ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ಸೆಸ್ಸೆಫ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ವತಿಯಿಂದ ಖುರ್ರತುಸ್ಸಾದಾತ್ ಸಯ್ಯಿದ್ ಕೂರತ್ ತಂಙಳ್ ರವರ ಪ್ರಥಮ ಉರೂಸ್ ಪ್ರಚಾರ ಸಭೆ ಹಾಗು ಅನುಸ್ಮರಣಾ ಕಾರ್ಯಕ್ರಮ ಉಳ್ಳಾಲ ಅಕ್ಕರೆಕೆರೆಯ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು.  ಕಾರ್ಯಕ್ರಮದ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಕೆ ಎಂ ಜೆ ಅಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕೋಟೆಕಾರ್ ಜುಮಾ ಮಸ್ಜಿದ್ ಮುದರ್ರಿಸ್ ಅಬ್ದುರ್ರಝ್ಝಾಖ್ ಸಅದಿ ಮದಕ ಅನುಸ್ಮರಣಾ ಭಾಷಣ ಮಾಡಿದರು. ಎಸ್ ವೈ ಎಸ್ ಉಳ್ಳಾಲ ಝೋನ್ ನಾಯಕ ಸಯ್ಯಿದ್ ಖುಬೈಬ್ ತಂಙಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಸೂರಃ ಯಾಸೀನ್ ಪಾರಾಯಣ, ತಹ್ಲೀಲ್ ಸಮರ್ಪಣೆ ನಡೆಸಲಾಯಿತು. ಎಸ್ಸೆಸ್ಸೆಫ್ ನಾಯಕ ಆಶಿಖ್ ಹಿಮಮಿ ಸಖಾಫಿ ನಶೀದಃ ಹಾಡಿದರು. ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಹ್ಮದ್ ಹಳೆಕೋಟೆ, ಕೋಶಾಧಿಕಾರಿ ಶರೀಫ್ ಮಂಚಿಲ, ಝೋನ್ ನಾಯಕರಾದ ಇಸಾಖ್ ಪೇಟೆ, ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಅಕ್ಕರೆಕೆರೆ, ಕೋಶಾಧಿಕಾರಿ ಆರ್ ಕೆ ಮದನಿ, ಕೆ ಎಂ ಜೆ  ಕೋಶಾಧಿಕಾರಿ ಅಬ್ದುಲ್ ರಹ್ಮಾನ್ ಅಕ್ಕರೆಕರೆ, ಮುಹಮ್ಮದ್ ಮದನಿ ಹಳೆಕೋಟೆ ಸಹಿತ ಸಂಘಟನಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು. ...