ದ.ಕ ಜಿಲ್ಲಾಡಳಿತ ಹಾಗು ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ ಇದರ ಸಹಭಾಗಿತ್ವದಲ್ಲಿ ಉಳ್ಳಾಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಶ್ರೀ ಯು.ಟಿ ಖಾದರ್ ಇವರ ಸಹಕಾರದೊಂದಿಗೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಹಮ್ಮಿಕೊಂಡ ಉಚಿತ ಪ್ರಥಮ ಹಾಗು ದ್ವಿತೀಯ ಡೋಸ್ ಕೋವಿಡ್ ಲಸಿಕಾ ಕಾರ್ಯಕ್ರಮ ಉಳ್ಳಾಲ ಆಝಾದ್ ನಗರದ ಹೆಣ್ಮಕ್ಕಳ ಹಝ್ರತ್ ಶಾಲೆಯಲ್ಲಿ ಇಂದು ನಡೆಯಿತು.
ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ದುಆ ಮೂಲಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾದ ಪ್ರಥಮ ಹಾಗು ದ್ವಿತೀಯ ಡೋಸ್ ಲಸಿಕೆ ನೀಡುವ ಕಾರ್ಯಕ್ರಮ ಸಂಜೆ ತನಕ ಮುಂದುವರಿಯಿತು. ಉಳ್ಳಾಲ ಸೆಂಟರ್ ವ್ಯಾಪ್ತಿಯ ನಾಗರಿಕರು ಇದರ ಸದುಪಯೋಗ ಪಡೆದರು.
ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪ್ರಧಾನ ಕಾರ್ಯದರ್ಶಿ ಇಸಾಕ್ ಪೇಟೆ ಕಾರ್ಯಕ್ರಮದ ಉಸ್ತುವಾರಿ ವಹಿಸಿ ನಿರ್ವಹಣೆ ಮಾಡಿದರು. ಪ್ರಸ್ತುತ ಲಸಿಕಾ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ ಇದರ ವೈದ್ಯರಾದ ವಿದ್ಯಾ ಸಾಗರ್, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಗೌರವಾಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್, ಎಸ್ ವೈ ಎಸ್ ರಾಜ್ಯ ಸದಸ್ಯರಾದ ಹನೀಫ್ ಹಾಜಿ ಉಳ್ಳಾಲ, ಉಳ್ಳಾಲ ನಗರಸಭಾ ಉಪಾಧ್ಯಕ್ಷ ಅಯ್ಯೂಬ್ ಮಂಚಿಲ, ಸ್ಥಳೀಯ ಕೌನ್ಸಿಲರ್ ಅಶ್ರಫ್ ಆಝಾದ್ ನಗರ, ಆಝಾದ್ ನಗರ ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಫ್ಯಾನ್ಸಿ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ, ಕಾರ್ಯಕಾರಿ ಸಮಿತಿ ಸದಸ್ಯರಾದ ಅಬ್ದುರ್ರಹ್ಮಾನ್ ಅಕ್ಕರೆಕೆರೆ ಹಾಗು ಅಬ್ದುಸ್ಸತ್ತಾರ್ ಮೇಲಂಗಡಿ, ಸೆಂಟರ್ ಕೋಶಾಧಿಕಾರಿ ಅಬ್ದುಸ್ಸಮದ್, ಪಟ್ಲ ಖುವ್ವತುಲ್ ಇಸ್ಲಾಂ ಮದ್ರಸದ ಮುಖ್ಯೋಪಾಧ್ಯಾಯರಾದ ಮುನೀರ್ ಲತೀಫಿ, ಎಸ್ಸೆಸ್ಸೆಫ್ ಉಳ್ಳಾಲ ನಾಯಕರಾದ ಮುಝಮ್ಮಿಲ್ ಮದನಿ ಕೋಟೆಪುರ, ತಾಜುದ್ದೀನ್ ಹಳೆಕೋಟೆ, ಹನೀಫ್ ಬೊಟ್ಟು, ಶಿಹಾಂ ಮುಕ್ಕಚ್ತೇರಿ, ಕಲಂದರ್ ಹುಸೈನ್ ಮೇಲಂಗಡಿ, ನಿಝಾಮ್ ಒಂಭತ್ತುಕೆರೆ ಸಹಿತ ಎಸ್ ವೈ ಎಸ್, ಎಸ್ಸೆಸ್ಸೆಫ್ ನಾಯಕರುಗಳು ಉಪಸ್ಥಿತರಿದ್ದರು.






Comments