Skip to main content

Posts

Showing posts from November, 2021

ಎಸ್ ವೈ ಎಸ್ ಉಳ್ಳಾಲ ಸೆಂಟರ್ ನೂತನ ಪದಾಧಿಕಾರಿಗಳ ಆಯ್ಕೆ.

ಎಸ್ ವೈ ಎಸ್ ಉಳ್ಳಾಲ ಸೆಂಟರ್ ವಾರ್ಷಿಕ ಮಹಾಸಭೆ ಸೆಂಟರ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ರವರ ಅಧ್ಯಕ್ಷತೆಯಲ್ಲಿ ಮೇಲಂಗಡಿಯ ತಾಜುಲ್ ಉಲಮಾ ಆಡಿಟೋರಿಯಂನಲ್ಲಿ ಇತ್ತೀಚೆಗೆ ನಡೆಯಿತು. ಸೆಂಟರ್ ಗೌರವಾಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ಸಭೆಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಸ್ ವೈ ಎಸ್ ದ.ಕ ಜಿಲ್ಲಾಧ್ಯಕ್ಷರಾದ ಅಶ್ ಅರಿಯ್ಯ ಮುಹಮ್ಮದ್ ಅಲಿ ಸಖಾಫಿ ಮಾತನಾಡಿ ಎಸ್ ವೈ ಎಸ್ ಹೆಮ್ಮರವಾಗಿ ಬೆಳೆಯಲು ನಿಮಿತ್ತರಾದ ಎಸ್ ವೈ ಎಸ್  ಪೂರ್ವಿಕ ನೇತಾರರ ಕಠಿಣ ಪರಿಶ್ರಮದ ಕುರಿತು ಸಭೆಯಲ್ಲಿ ತಿಳಿಸಿದರು. ಸೆಂಟರ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಹಾಖ್ ವರದಿ ಹಾಗು ಸೆಂಟರ್ ಕೋಶಾಧಿಕಾರಿ ಅಬ್ದುಸ್ಸಮದ್ ಮುಕ್ಕಚ್ಚೇರಿ ಲೆಕ್ಕಪತ್ರ ಮಂಡಿಸಿದರು. ಬಳಿಕ ಚುನಾವಣಾ ವೀಕ್ಷಕರಾಗಿ ಆಗಮಿಸಿದ ಇಸ್ಹಾಖ್ ಝುಹ್ರಿಯವರ ನೇತ್ರತ್ವದಲ್ಲಿ ಹಾಲಿ ಸಮಿತಿಯನ್ನು ವಿಸರ್ಜಿಸಿ, ನೂತನ ಸಮಿತಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಗೌರವಾಧ್ಯಕ್ಷರಾಗಿ ಸಯ್ಯಿದ್ ಜಲಾಲ್ ತಂಗಲ್, ನೂತನಾಧ್ಯಕ್ಷರಾಗಿ ಪಿ ಎಸ್ ಎಂ ಶಿಹಾಬುದ್ದೀನ್ ಸಖಾಫಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿಯಾಗಿ ಇಸ್ಹಾಖ್ ಪೇಟೆ, ಕೋಶಾಧಿಕಾರಿಯಾಗಿ ಬಶೀರ್ ಸಖಾಫಿ ಉಳ್ಳಾಲ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಹನೀಫ್ ಹಾಜಿ ಉಳ್ಳಾಲ, ದಅವಾ ಕಾರ್ಯದರ್ಶಿಯಾಗಿ ಮನ್ಸೂರ್ ಹಳೆಕೋಟೆ, ಸಂಘಟನಾ ಕಾರ್ಯದರ್ಶಿಯಾಗಿ ಫಾರೂಖ್ ಅಬ್ಬಾಸ್ ಹಾಜಿ ಕೋಟೆಪುರ, ಇಸಾಬಃ ಕಾರ್ಯದರ್ಶಿಯಾಗಿ ಶರೀಫ್ ಮಂಚಿಲ, ಕಾರ್ಯಕ್ರ...

ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ಪಾಂಚ್ ವತಿಯಿಂದ ಬ್ರಹತ್ ಮೌಲಿದ್ ಮಜ್ಲಿಸ್ ಕಾರ್ಯಕ್ರಮ

ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ಪಾಂಚ್ ವತಿಯಿಂದ ಬ್ರಹತ್ ಮೌಲಿದ್ ಮಜ್ಲಿಸ್ ಕಾರ್ಯಕ್ರಮ ನವೆಂಬರ್ 4 ರಂದು ಬ್ರಾಂಚ್ ಅಧ್ಯಕ್ಷರ ನಿವಾಸದಲ್ಲಿ ನಡೆಯಿತು. ಮಜ್ಲಿಸಿನಲ್ಲಿ ಬ್ರಾಂಚಿನ ನಾಯಕರು, ಸದಸ್ಯರು ಭಾಗವಹಿಸಿದರು. ಪ್ರವಾದಿ ಪ್ರೇಮದ ಕುರಿತು ತೋಟ ಮಸೀದಿ ಇಮಾಮರಾದ ಯೂನುಸ್ ಇಮ್ದಾದಿ ಅಲ್ ಫುರ್ಖಾನೀ ತರಗತಿ ನಡೆಸಿದರು.  ಬ್ರಾಂಚಿನ ವತಿಯಿಂದ ನಡೆದ ಮೌಲಿದ್ ಕಾರ್ಯಕ್ರಮದ ಪೂರ್ವಭಾವಿಯಾಗಿ ಎಸ್ ವೈ ಎಸ್ ಕಾರ್ಯಕರ್ತರ ಮನೆ ಮನೆಗಳಲ್ಲಿ ಮೌಲಿದ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಅಕ್ಟೋಬರ್ 24 ರಿಂದ ನವೆಂಬರ್ 03 ರ ವರೆಗೆ ಎಸ್ ವೈ ಎಸ್ ಸದಸ್ಯರ ಮನೆಗಳಲ್ಲಿ ಮೌಲೂದ್ ಮಜ್ಲಿಸ್ ನಡೆಯಿತು.