ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಮಿತಿಯಿಂದ ಕರ್ನಾಟಕ ರಾಜ್ಯ ಎಸ್ ವೈ ಎಸ್ ನೂತನ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ ಉಳ್ಳಾಲ ಆಝಾದ್ ನಗರದ ಇಸ್ಲಾಮಿಕ್ ನೋಲೇಜ್ ಸೆಂಟರಿನಲ್ಲಿ ಇತ್ತೀಚೆಗೆ ಜರುಗಿತು.
ರಾಜ್ಯದ ಎಸ್ ವೈ ಎಸ್ ನೂತನ ಪದಾಧಿಕಾರಿಗಳ ಆಯ್ಕೆಯ ನಂತರದ ಪ್ರಥಮ ಕ್ಯಾಬಿನೆಟ್ ಮೀಟ್ ಉಳ್ಳಾಲದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ನಿಮಿತ್ತ ಉಳ್ಳಾಲಕ್ಕೆ ಆಗಮಿಸಿದ ರಾಜ್ಯ ನಾಯಕರು ಉಳ್ಳಾಲ ದರ್ಗಾ ಝಿಯಾರತ್ ನಡೆಸಿ, ಉಳ್ಳಾಲ ಆಝಾದ್ ನಗರದ ಇಸ್ಲಾಮಿಕ್ ನೋಲೇಜ್ ಸೆಂಟರಿನಲ್ಲಿ ಪ್ರಥಮ ಕ್ಯಾಬಿನೆಟ್ ಮೀಟ್ ನಡೆಸಿದರು.
ಪ್ರಸ್ತುತ ಸಭೆಯ ಆರಂಭದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಸಮಿತಿ ವತಿಯಿಂದ ರಾಜ್ಯ ಎಸ್ ವೈ ಎಸ್ ನೂತನ ಪದಾಧಿಕಾರಿಗಳಾದ ರಾಜ್ಯಾಧ್ಯಕ್ಷ ಡಾ.ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಫೀಲ್ ಸಅದಿ ಕೊಳಕೇರಿ, ಉಪಾಧ್ಯಕ್ಷ ಸಯ್ಯಿದ್ ಜಾಫರ್ ಸಖಾಫ್ ತಂಗಲ್ ಕೋಟೇಶ್ವರ, ಕೋಶಾಧಿಕಾರಿ ಅಬ್ದುಲ್ ಹಕೀಂ ಕೊಡ್ಲಿಪೇಟೆ, ಸಂಘಟನಾ ಕಾರ್ಯದರ್ಶಿ ಜಿ.ಎಂ ಕಾಮಿಲ್ ಸಖಾಫಿ, ದಅವಾ ಕಾರ್ಯದರ್ಶಿ ಕೆ.ಕೆ.ಎಂ ಕಾಮಿಲ್ ಸಖಾಫಿ, ರಾಜ್ಯ ನಿಕಟ ಪೂರ್ವ ಅಧ್ಯಕ್ಷ ಉಸ್ಮಾನ್ ಸಅದಿ ಪಟ್ಟೋರಿ, ಇಸಾಬಃ ಕಾರ್ಯದರ್ಶಿ ಬಶೀರ್ ಸಅದಿ ಬೆಂಗಳೂರು, ಪಬ್ಲಿಕ್ ರಿಲೇಶನ್ಸ್ ಕಾರ್ಯದರ್ಶಿ ಬಿ.ಜಿ ಹನೀಫ್ ಹಾಜಿ ಉಳ್ಳಾಲ, ನೋರ್ತ್ ಕೌನ್ಸಿಲ್ ಕಾರ್ಯದರ್ಶಿ ಅಬ್ದುಲ್ ಹಮೀದ್ ಬಜ್ಪೆ ಹಾಗು ಸೋಶಿಯಲ್ ಕಾರ್ಯದರ್ಶಿ ಹಂಝ ನೆಲ್ಲಿಹುದಿಕೇರಿ ಇವರುಗಳನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.
ಸೆಂಟರ್ ಅಧ್ಯಕ್ಷರಾದ ಶಿಹಾಬುದ್ದೀನ್ ಸಖಾಫಿ ಉಳ್ಳಾಲ ಅಭಿನಂದನಾ ಮಾತುಗಳನ್ನಾಡಿದರು. ಡಾ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಮತ್ತು ಹಫೀಲ್ ಸಅದಿ ಕೊಳಕೇರಿ ಸನ್ಮಾನ ಸ್ವೀಕರಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದಕ್ಷಿಣ ಭಾರತದ ಅಜ್ಮೀರ್ ಎಂದೇ ಹೆಸರುವಾಸಿಯಾಗಿರುವ ಉಳ್ಳಾಲದ ಸಯ್ಯಿದ್ ಮದನಿ ದರ್ಗಾ ಝಿಯಾರತ್ ನಡೆಸಿ, ರಾಜ್ಯ ಎಸ್ ವೈ ಎಸ್ ನ ನೂತನ ಪದಾಧಿಕಾರಿಗಳ ಪ್ರಥಮ ಸಭೆ ಉಳ್ಳಾಲದಲ್ಲಿ ನಡೆಯುತ್ತಿರುವುದು ತುಂಬಾ ಸಂತಸವಿದೆ ಎಂದು ಸೆಂಟರ್ ಗೌರವಾಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಲ್ ತಿಳಿಸಿದರು. ಸಯ್ಯಿದ್ ಮದನಿ ತಂಗಲ್ ರವರ ಮಹಿಮೆಯಿಂದ ತಮ್ಮೆಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ಒಳಿತಾಗಲಿ ಎಂದು ಅವರು ಪ್ರಾರ್ಥಿಸಿದರು.
ಪ್ರಸ್ತುತ ಅಭಿನಂದನಾ ಸಮಾರಂಭದಲ್ಲಿ ಸೆಂಟರ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಹಾಖ್, ಸೆಂಟರ್ ಕೋಶಾಧಿಕಾರಿ ಬಶೀರ್ ಸಖಾಫಿ ಉಳ್ಳಾಲ, ಸಂಘಟನಾ ಕಾರ್ಯದರ್ಶಿ ಫಾರೂಖ್ ಅಬ್ಬಾಸ್ ಹಾಜಿ ಕೋಟೆಪುರ, ಎಸ್ಸೆಸ್ಸೆಫ್ ದ.ಕ ಜಿಲ್ಲಾ ಯುವ ನಾಯಕರಾದ ಸಯ್ಯಿದ್ ಖುಬೈಬ್ ತಂಗಲ್, ಸಾಂತ್ವನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಅಕ್ಕರೆಕೆರೆ, ದಅವಾ ಕಾರ್ಯದರ್ಶಿ ಮನ್ಸೂರ್ ಹಳೆಕೋಟೆ, ಇಸಾಬಃ ಕಾರ್ಯದರ್ಶಿ ಶರೀಫ್ ಮಂಚಿಲ ಹಾಗು ಕಾರ್ಯಕಾರಿ ಸಮಿತಿ ಸದಸ್ಯರಾದ ಅಬ್ದುಸ್ಸಮದ್ ಮದನಿ ನಗರ ಉಪಸ್ಥಿತರಿದ್ದರು.
Comments