ಇತಿಹಾಸ ಪ್ರಸಿದ್ಧ ಸಯ್ಯಿದ್ ಮದನಿ ದರ್ಗಾ ಹೆಸರನ್ನು ಓವರ್ ಬ್ರಿಡ್ಜ್ ನಿಂದ ಉಳ್ಳಾಲ ತನಕದ ರಸ್ತೆಗೆ ನಾಮಕರಣ ಮಾಡಲು ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಶಿಹಾಬುದ್ದೀನ್ ಸಖಾಫಿ ಉಳ್ಳಾಲ ನೇತ್ರತ್ವದ ನಾಯಕರ ತಂಡ ಉಳ್ಳಾಲ ನಗರ ಸಭೆ ಅಧ್ಯಕ್ಷರಾದ ಚಿತ್ರಕಲಾ ರವರ ಮೂಲಕ ಉಳ್ಳಾಲ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿತು.
ಉಳ್ಳಾಲದ ಸಯ್ಯಿದ್ ಮದನಿ ದರ್ಗಾ ದಕ್ಷಿಣ ಭಾರತದ ಅಜ್ಮೀರ್ ಎಂಬ ಖ್ಯಾತಿಯನ್ನು ಪಡೆದಿರುತ್ತದೆ. ಸದ್ರಿ ದರ್ಗಾಕ್ಕೆ ಜಾತಿ-ಮತ, ಭಾಷೆ, ವರ್ಣ ಭೇದವಿಲ್ಲದೆ ಸಾವಿರಾರು ಭಕ್ತರು ಪ್ರತಿ ದಿನ ಸಂದರ್ಶಿಸುತ್ತಿದ್ದಾರೆ. ಪ್ರತಿ ಐದು ವರ್ಷಗಳಿಗೊಮ್ಮೆ ಬಹಳ ವಿಜ್ರಂಭಣೆ, ಸಡಗರದಿಂದ ಐತಿಹಾಸಿಕ ಉರೂಸ್ ಕಾರ್ಯಕ್ರಮವು ನಡೆಯುತ್ತದೆ.
ಆದುದರಿಂದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲಕ್ಕೆ ಬರುವ ರಸ್ತೆಗೆ ಸೈಯದ್ ಮದನಿ ದರ್ಗಾ ರಸ್ತೆ ಎಂದು ನಾಮಕರಣ ಮಾಡಲು ಶೀಘ್ರದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಾಗಿ ಎಸ್ ವೈ ಎಸ್ ನಿಯೋಗ ಮನವಿ ಸಲ್ಲಿಸಿದೆ.
ನಿಯೋಗದಲ್ಲಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಹಾಖ್, ಎಸ್ ವೈ ಎಸ್ ದ.ಕ ಜಿಲ್ಲಾ ನಾಯಕರಾದ ವಿ.ಎ ಸಖಾಫಿ, ಸೆಂಟರ್ ಕೋಶಾಧಿಕಾರಿ ಬಶೀರ್ ಸಖಾಫಿ ಉಳ್ಳಾಲ, ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ, ಸಾಂತ್ವನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಹಾಜರಿದ್ದರು.
Comments