ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಯುನಿಟ್ ದ್ವಿ ವಾರ್ಷಿಕ ಮಹಾಸಭೆ ಅಕ್ಕರೆಕೆರೆಯ ಯುನಿಟ್ ಕಛೇರಿಯಲ್ಲಿ ನಡೆಯಿತು. ಹಸನ್ ಹಾಜಿ ಸಭೆಯ ಅಧ್ಯಕ್ಷತೆ ವಹಿಸಿದರು. ಶಂಶುದ್ದೀನ್ ಮದನಿ ಉಳ್ಳಾಲ ದುಆ ನೆರವೇರಿಸಿದರು. ಯುನಿಟ್ ಪ್ರಧಾನ ಕಾರ್ಯದರ್ಶಿ ಆರ್ ಕೆ ಮದನಿ ಸ್ವಾಗತಿಸಿದರು. ಎಸ್ ವೈ ಎಸ್ ಯುನಿಟ್ ಅಧ್ಯಕ್ಷರಾದ ಅಶ್ರಫ್ ಝುಹ್ರಿ ಸಭೆಯನ್ನು ಉದ್ಘಾಟಿಸಿದರು. ವರದಿ ಹಾಗು ಲೆಕ್ಕಪತ್ರ ಮಂಡಿಸಿ, ಸಭೆಯ ಅಂಗೀಕಾರ ಪಡೆಯಲಾಯಿತು. ಎರಡು ವರ್ಷಗಳ ಅವಧಿಯಲ್ಲಿ ಯುನಿಟ್ ಸಮಿತಿ ಮಾಡಿದ ಸಾಮಾಜಿಕ, ಧಾರ್ಮಿಕ, ಆಧ್ಯಾತ್ಮಿಕ ಕಾರ್ಯ ಚಟುವಟಿಕೆಯ ಮಾಹಿತಿಯನ್ನು ನೀಡಲಾಯಿತು ಚುನಾವಣಾ ವೀಕ್ಷಕರಾಗಿ ಆಗಮಿಸಿದ ಉಳ್ಳಾಲ ಸರ್ಕಲ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಮಾತನಾಡಿ ಸುನ್ನೀ ಸಂಘಟನೆಯಲ್ಲಿ ಸದಸ್ಯತ್ವ ಪಡೆದ ನಮ್ಮ ವರ್ತನೆ ಶಿಸ್ತಿನಿಂದ ಕೂಡಿರಬೇಕೆಂದು ತಿಳಿಸಿದರು. ನಂತರ ಹಾಲಿ ಸಮಿತಿಯನ್ನು ವಿಸರ್ಜಿಸಿ, ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಬ್ರಾಂಚ್ ಸಮಿತಿಯ ನೂತನಾಧ್ಯಕ್ಷರಾಗಿ ಅಶ್ರಫ್ ಝುಹ್ರಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ನವಾಝ್ ಸಖಾಫಿ ಉಳ್ಳಾಲ, ಕೋಶಾಧಿಕಾರಿಯಾಗಿ ಆರ್ ಕೆ ಮದನಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಅಬೂ ಮಫಾಝ್ ಮದನಿ ಹಳೆಕೋಟೆ, ದಅವಾ ಮತ್ತು ಟ್ರೈನಿಂಗ್ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ, ಇಸಾಬಃ ಮ...
ಇದು SYS ಉಳ್ಳಾಲ ಸೆಂಟರಿನ ಅಧಿಕ್ರತ ಬ್ಲಾಗ್ ಆಗಿದೆ.ಇದರಲ್ಲಿ SYS ಉಳ್ಳಾಲ ಸೆಂಟರ್ ಮತ್ತು ಇದರ ಅಧೀನ ಬ್ರಾಂಚುಗಳ ಕಾರ್ಯಕ್ರಮಗಳು, ವರದಿಗಳು ಹಾಗೂ ಫೋಟೋಸ್ ಗಳು ಲಭ್ಯವಾಗಲಿದೆ