Skip to main content

ಅಕ್ಕರೆಕೆರೆ ಸುನ್ನೀ ಆದರ್ಶ ಸಮ್ಮೇಳನ ಅಭೂತಪೂರ್ವ ಯಶಸ್ವಿ

KMJ, SYS ಅಕ್ಕರೆಕೆರೆ ಹಳೆಕೋಟೆ ಶಾಖೆ ಹಮ್ಮಿಕೊಂಡ ಸುನ್ನೀ ಆದರ್ಶ ಸಮ್ಮೇಳನ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಉಳ್ಳಾಲದ ಅಕ್ಕರೆಕೆರೆಯಲ್ಲಿ ಮೌಲವಿಗಳು ಸ್ಟೇಜ್ ಕಟ್ಟಿ ಬಿತ್ತರಿಸಿದ ವಂಚನೆಗಳನ್ನು ಒಂದೊಂದಾಗಿ ಬಯಲಿಗೆಳೆದು ಉಳ್ಳಾಲದ ನಾಗರಿಕರಿಗೆ ಸುನ್ನತ್ ಜಮಾಅತಿನ ನೈಜ ಆಶಯಾದರ್ಶಗಳನ್ನು ಸವಿಸ್ತಾರವಾಗಿ ತೋಕೆ ಉಸ್ತಾದ್ ವಿವರಿಸಿದ್ದಾರೆ. 

ಉಳ್ಳಾಲದ ಅಲ್ಲಲ್ಲಿ ನೂತನವಾದಿಗಳು ಸ್ಟೇಜ್ ಕಟ್ಟಿ ತಮ್ಮ ವಿಚಿತ್ರ ನೀಚ ಆಶಯಗಳನ್ನು ಬಿತ್ತರಿಸುತ್ತಿದ್ದರು. ತಮಗೆ ಅರಿವಿಲ್ಲ ಎಂದು ಕೂಡಾ ಅರಿಯದ ಕೆಲವು ಮೌಲವಿಗಳು ಒಟ್ರಾಸಿ ಇಸ್ಲಾಮಿನ ಬಗ್ಗೆ ಮಾತನಾಡುತ್ತಿದ್ದರು. ರಮಳಾನಿಗೆ ಸ್ವಾಗತ ಎಂಬ ಹೆಸರಿಟ್ಟು ಮಾಡಿದ ಸಲಫಿಗಳ ಸಭೆಯಲ್ಲಿ ರಮಳಾನ್ ನಲ್ಲಿ ಮಾಡಬೇಕಾದ ಎಲ್ಲಾ ಒಳಿತುಗಳನ್ನು ಸ್ವಯಂ ರಿಮೂವ್ ಮಾಡಿ ಮಾತನಾಡುತ್ತಿದ್ದರು.  ಇಸ್ಲಾಮಿನ ಬಾಲಪಾಠ ಕೂಡಾ ಅವರಿಗೆ ತಿಳಿದಿಲ್ಲ ಎಂದು ಅವರ ಮಾತಿನಿಂದಲೇ ತಿಳಿಯುತ್ತಿತ್ತು. ಸಲಫಿ ಮೌಲವಿಗಳು ಮುಗ್ಧ ಜನರನ್ನು ಹೇಗಾದರೂ ಮಾಡಿ ವಂಚಿಸಬಹುದು ಎಂದು ಅವರ ವಿವರಣೆಯಿಂದ ತಿಳಿಯುತ್ತದೆ. ಇಸ್ಲಾಮಿನ ಸುಂದರ ಆಶಯಾದರ್ಶಗಳಿಗೆ ಧಕ್ಕೆ ತರುವಂತಹ ಕುಪ್ರಯತ್ನಗಳು ಸಲಫಿ ಮೌಲವಿಗಳು ನಡೆಸಿದರಿಂದ ಇಸ್ಲಾಮಿನ ಎಳೆಯ ಬಾಲಕರ, ಯುವಕರ ಮನಸ್ಸಿನಲ್ಲಿ ಚಂಚಲತೆ ಉಂಟು ಮಾಡುವ ಪ್ರಯತ್ನ ಮಾಡಿದ ನಿಮಿತ್ತ ಇಸ್ಲಾಮಿನ ನೈಜ ಆಶಯಗಳನ್ನು ತಿಳಿಸುವ ಸಲುವಾಗಿ ಕರ್ನಾಟಕ ಮುಸ್ಲಿಂ ಜಮಾಅತ್ ಮತ್ತು ಸುನ್ನೀ ಯುವಜನ ಸಂಘ ಅಕ್ಕರೆಕೆರೆ ಹಳೆಕೋಟೆ ಶಾಖೆಯ ವತಿಯಿಂದ ಉಳ್ಳಾಲದ ಹ್ರದಯ ಭಾಗವಾದ ಅಕ್ಕರೆಕೆರೆ ಜಂಕ್ಷನ್ ನಲ್ಲಿ ಸುನ್ನೀ ಆದರ್ಶ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು. 

KMJ, SYS ಅಕ್ಕರೆಕೆರೆ ಹಳೆಕೋಟೆ ಶಾಖೆಯ ನಾಯಕರ ಕಾರ್ಯಕರ್ತರ ಕಠಿಣ ಪರಿಶ್ರಮ ಮತ್ತು ಉದಾರ ದಾನಿಗಳ ಸಹಕಾರ ಇದರ ಹಿಂದೆ ಇದೆ. ಕೇವಲ ಒಂದುವರೆ ದಿನದಲ್ಲಿ ಕಾರ್ಯಕ್ರಮದ ಎಲ್ಲಾ ಸೆಟಪ್ಪು ಮಾಡಲಾಗಿತ್ತು. ಸಂಶಯ ನಿವಾರಣೆಗೆ ಮುಕ್ತ ಅವಕಾಶ ಇದ್ದರೂ ಯಾವುದೇ ಸಂಶಯಗಳು ಉಳಿಯದ ರೀತಿಯಲ್ಲಿ ತೋಕೆ ಉಸ್ತಾದ್ ರವರ ಕ್ಲಿಪ್ಪಿಂಗ್ ಸಹಿತ ವಿವರಣೆ ಸುಂದರವಾಗಿತ್ತು. 

ಉಳ್ಳಾಲ ಸುತ್ತಮುತ್ತಲಿಂದ ಜನ ಹರಿದು ಬಂದರು. ಒಂದೆರಡು ಸಲಫಿಗಳು ಸಭೆಯೆಡೆಯಲ್ಲಿದ್ದರು. ಗುಸುಗುಸು ಮಾತನಾಡುತ್ತಿದ್ದರು. ತೋಕೆ ಉಸ್ತಾದರ ಸರಿಯಾದ ವಿವರಣೆ ಅವರ ಮನಸ್ಸಿಗೆ ನಾಟಿತೋ ಏನೋ ಮತ್ತೆ ಅವರು ಸುಮ್ಮನಾಗಿದ್ದರು. 

ಸಲಫಿಗಳೊಂದಿಗೆ ಹೇಳಲಿಕ್ಕಿರುವುದೇನೆಂದರೆ ಮೌಲವಿಗಳೆನಿಸಿಕೊಂಡವರು ನಿಮ್ಮನ್ನು ವಂಚಿಸುತ್ತಿದ್ದಾರೆ. ಕೆಳಗೆ ಸುನ್ನೀ ಆದರ್ಶ ಸಮ್ಮೇಳನದ ಲಿಂಕ್ ಹಾಕಿದ್ದೇನೆ. ಸಲಫಿ ಮೌಲವಿಗಳ ವಿಚಿತ್ರ ಪೊಳ್ಳುವಾದಗಳು ಮತ್ತು ಅದಕ್ಕೆ ತೋಕೆ ಉಸ್ತಾದರ ತಕ್ಕ ಪ್ರತ್ಯುತ್ತರ ಪ್ರಮಾಣಗಳ ಸಹಿತ ಆ ಲಿಂಕಿನಲ್ಲಿದೆ. ಸಮಯ ಸಿಕ್ಕಾಗ ಸಂಪೂರ್ಣವಾಗಿ ವೀಕ್ಷಿಸಿ.

✍️ ನವಾಝ್ ಸಖಾಫಿ ಉಳ್ಳಾಲ 
ಪ್ರ ಕಾರ್ಯದರ್ಶಿ : ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆ

Comments

Popular posts from this blog

ಎಸ್ ವೈ ಎಸ್ ಉಳ್ಳಾಲ ಮಂಚಿಲ ಸರ್ಕಲ್ ರಚನೆ

ಎಸ್ ವೈ ಎಸ್ ಉಳ್ಳಾಲ ಝೋನ್ ನೇತ್ರತ್ವದಲ್ಲಿ ಎಸ್ ವೈ ಎಸ್ ಮಂಚಿಲ ಸರ್ಕಲ್ ರಚನಾ ಸಭೆ ಉಳ್ಳಾಲ ಮಂಚಿಲದ ಮಂಬವುಲ್ ಉಲೂಂ ಮದ್ರಸ ಸಭಾ ಭವನದಲ್ಲಿ ನಡೆಯಿತು. ಮಂಚಿಲದ ಅಲ್ ಮಸ್ಜಿದುಲ್ ಮುನವ್ವರ್ ಖತೀಬರಾದ ಮುಹಮ್ಮದ್ ಮುದ್ರಿಕ ಮದನಿ ದುಆ ನೆರವೇರಿಸಿದರು. ಸರ್ಕಲ್ ರಚನೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಸಭೆಯನ್ನು ಉದ್ಘಾಟಿಸಿ ಸಮಾಜದ, ಸಮುದಾಯದ ಸಬಲೀಕರಣ, ಸಾಂಘಿಕ ಶಕ್ತಿ ಮತ್ತು ನಾಯಕರುಗಳ ಸೃಷ್ಟಿಗೆ ಉಳ್ಳಾಲ ಝೋನ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಶಾಖೆಗಳನ್ನು ಸೇರಿಸಿ ಸರ್ಕಲ್ ಗಳನ್ನು ರಚಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.  ಪ್ರಸ್ತುತ ಸಭೆಯಲ್ಲಿ ಅಕ್ಕರೆಕೆರೆ, ಹಳೆಕೋಟೆ, ಮಂಚಿಲ ಮತ್ತು ಮಾರ್ಗತಲೆ ಶಾಖೆಗಳನ್ನು ಸೇರಿಸಿ ಮಂಚಿಲ ಸರ್ಕಲನ್ನು ರಚಿಸಿ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಶಮೀರ್ ಸಖಾಫಿ ಅಕ್ಕರೆಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾರ್ಗತಲೆ, ಕೋಶಾಧಿಕಾರಿಯಾಗಿ ಇರ್ಫಾನ್ ಮಂಚಿಲ, ಉಪಾಧ್ಯಕ್ಷರಾಗಿ ಮುಹಮ್ಮದ್ ಮದನಿ ಹಳೆಕೋಟೆ, ದಅವಾ ಕಾರ್ಯದರ್ಶಿಯಾಗಿ ಆರ್ ಕೆ ಮದನಿ ಅಕ್ಕರೆಕೆರೆ, ಇಸಾಬಃ ಕಾರ್ಯದರ್ಶಿಯಾಗಿ ಸಯೀದ್ ಮಂಚಿಲ, ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ಹಳೆಕೋಟೆ  ಮತ್ತು ಮಾಧ್ಯಮ ವಕ್ತಾರರಾಗಿ ನವಾಝ್ ಸಖಾಫಿ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು. ...

ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್

ಕರ್ನಾಟಕ ಮುಸ್ಲಿಂ ಜಮಾಅತ್ ಕೆ ಎಂ ಜೆ ಮತ್ತು ಎಸ್ ವೈ ಎಸ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ಆಶ್ರಯದಲ್ಲಿ ಗ್ರ್ಯಾಂಡ್ ಮೌಲಿದ್ ಮಜ್ಲಿಸ್ ಉಳ್ಳಾಲದ ಅಕ್ಕರೆಕೆರೆಯ ಸಂಘಟನಾ ಕಛೇರಿ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು. ಈ ಸಭೆಯ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಮೌಲಿದ್ ಮಜ್ಲಿಸಿನ ನೇತ್ರತ್ವವನ್ನು ಅಬೂ ಮಫಾಝ್ ಮದನಿ ವಹಿಸಿದರು. ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಮಾತನಾಡಿ ವಾರಕ್ಕೊಮ್ಮೆ ಶುಕ್ರವಾರ ಸುಬಹ್ ನಮಾಝ್ ಬಳಿಕದ ಮಜ್ಲಿಸ್, ಮಾಸಿಕ ಮಹ್ಳರತುಲ್ ಬದ್ರಿಯ್ಯಃ ಮಜ್ಲಿಸ್ ಹಾಗು ಶಾಖೆಯ ಆಶ್ರಯದಲ್ಲಿ ನಡೆಯುವ ಇತರ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ರಬೇಕೆಂದು ತಿಳಿಸಿದರು. ನವಾಝ್ ಸಖಾಫಿ ಉಳ್ಳಾಲ ದುಆ ನೆರವೇರಿಸಿದರು. ಎಸ್ ವೈ ಎಸ್ ಶಾಖಾ ಕೋಶಾಧಿಕಾರಿ ಆರ್ ಕೆ ಮದನಿ  ಕಾರ್ಯಕ್ರಮ ನಿರ್ವಹಣೆ ಮಾಡಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಕೆ ಎಂ ಜೆ ಶಾಖಾಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಟೇಲ್ ಕಂಪೌಂಡ್ ಮತ್ತು ಶಾಖಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು.

ಕೂರತ್ ತಂಙಳ್ ಪ್ರಥಮ ಉರೂಸ್ ಪ್ರಚಾರ ಸಭೆ ಹಾಗು ಅನುಸ್ಮರಣಾ ಕಾರ್ಯಕ್ರಮ

ಉಳ್ಳಾಲ : ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ಸೆಸ್ಸೆಫ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ವತಿಯಿಂದ ಖುರ್ರತುಸ್ಸಾದಾತ್ ಸಯ್ಯಿದ್ ಕೂರತ್ ತಂಙಳ್ ರವರ ಪ್ರಥಮ ಉರೂಸ್ ಪ್ರಚಾರ ಸಭೆ ಹಾಗು ಅನುಸ್ಮರಣಾ ಕಾರ್ಯಕ್ರಮ ಉಳ್ಳಾಲ ಅಕ್ಕರೆಕೆರೆಯ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು.  ಕಾರ್ಯಕ್ರಮದ ವೀಡಿಯೋ ನೋಡಲು ನನ್ನನ್ನು ಮುಟ್ಟಿ ಕೆ ಎಂ ಜೆ ಅಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಕೋಟೆಕಾರ್ ಜುಮಾ ಮಸ್ಜಿದ್ ಮುದರ್ರಿಸ್ ಅಬ್ದುರ್ರಝ್ಝಾಖ್ ಸಅದಿ ಮದಕ ಅನುಸ್ಮರಣಾ ಭಾಷಣ ಮಾಡಿದರು. ಎಸ್ ವೈ ಎಸ್ ಉಳ್ಳಾಲ ಝೋನ್ ನಾಯಕ ಸಯ್ಯಿದ್ ಖುಬೈಬ್ ತಂಙಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಸೂರಃ ಯಾಸೀನ್ ಪಾರಾಯಣ, ತಹ್ಲೀಲ್ ಸಮರ್ಪಣೆ ನಡೆಸಲಾಯಿತು. ಎಸ್ಸೆಸ್ಸೆಫ್ ನಾಯಕ ಆಶಿಖ್ ಹಿಮಮಿ ಸಖಾಫಿ ನಶೀದಃ ಹಾಡಿದರು. ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಹ್ಮದ್ ಹಳೆಕೋಟೆ, ಕೋಶಾಧಿಕಾರಿ ಶರೀಫ್ ಮಂಚಿಲ, ಝೋನ್ ನಾಯಕರಾದ ಇಸಾಖ್ ಪೇಟೆ, ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಅಕ್ಕರೆಕೆರೆ, ಕೋಶಾಧಿಕಾರಿ ಆರ್ ಕೆ ಮದನಿ, ಕೆ ಎಂ ಜೆ  ಕೋಶಾಧಿಕಾರಿ ಅಬ್ದುಲ್ ರಹ್ಮಾನ್ ಅಕ್ಕರೆಕರೆ, ಮುಹಮ್ಮದ್ ಮದನಿ ಹಳೆಕೋಟೆ ಸಹಿತ ಸಂಘಟನಾ ನಾಯಕರು, ಸದಸ್ಯರು, ಹಿತೈಷಿಗಳು ಭಾಗವಹಿಸಿದರು. ...