ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ಸೆಸ್ಸೆಫ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಂಝಾನ್ ಫಂಡ್ ವಿತರಣೆ
ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ಸೆಸ್ಸೆಫ್ ಅಕ್ಕರೆಕೆರೆ ಹಳೆಕೋಟೆ ಶಾಖೆಯ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಂಝಾನ್ ಫಂಡ್ ವಿತರಣಾ ಕಾರ್ಯಕ್ರಮ ಉಳ್ಳಾಲ ಅಕ್ಕರೆಕೆರೆಯ ಶಾಖಾ ಸಭಾ ಭವನ ಖುರ್ರತುಸ್ಸಾದಾತ್ ಸುನ್ನೀ ಸೆಂಟರಿನಲ್ಲಿ ನಡೆಯಿತು.
ಕೆ ಎಂ ಜೆ ಅಧ್ಯಕ್ಷರಾದ ಹಸನ್ ಹಾಜಿ ಉಳ್ಳಾಲ ಸಭೆಯ ಅಧ್ಯಕ್ಷತೆ ವಹಿಸಿದರು. ಎಸ್ ವೈ ಎಸ್ ಉಳ್ಳಾಲ ಝೋನ್ ಅಧ್ಯಕ್ಷರಾದ ಬಶೀರ್ ಸಖಾಫಿ ಉಳ್ಳಾಲ ಉದ್ಘಾಟಿಸಿದರು. ಕೆ ಎಂ ಜೆ ದಅವಾ ಕಾರ್ಯದರ್ಶಿ ಶಂಸುದ್ದೀನ್ ಮದನಿ ಹಾಗು ಎಸ್ ವೈ ಎಸ್ ಉಳ್ಳಾಲ ಸರ್ಕಲ್ ಅಧ್ಯಕ್ಷರಾದ ಮುಹಮ್ಮದ್ ಇಸ್ಹಾಖ್ ಉಳ್ಳಾಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬಳಿಕ ರಂಝಾನ್ ಫಂಡ್ ಅರ್ಹ ಬಡ ಕುಟುಂಬಗಳಿಗೆ ವಿತರಿಸಲಾಯಿತು. ಎಸ್ ವೈ ಎಸ್ ಶಾಖಾ ಪ್ರಧಾನ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ ಸ್ವಾಗತಿಸಿ ಎಸ್ ವೈ ಎಸ್ ಶಾಖಾಧ್ಯಕ್ಷರಾದ ಅಶ್ರಫ್ ಝುಹ್ರಿ ಧನ್ಯವಾದಗೈದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಕೆ ಎಂ ಜೆ ಶಾಖಾ ಉಪಾಧ್ಯಕ್ಷರಾದ ಹುಸೈನ್ ಮೋನು, ಕೋಶಾಧಿಕಾರಿ ಅಬ್ದುಲ್ ರಹ್ಮಾನ್, ಸಾಂತ್ವನ ಕಾರ್ಯದರ್ಶಿ ಅಬ್ದುಲ್ ಸತ್ತಾರ್, ಶಾಖಾ ಎಸ್ಸೆಸ್ಸೆಫ್ ನಾಯಕರಾದ ಹಾಫಿಲ್ ಆಶಿಖ್ ಹಿಮಮಿ ಸಖಾಫಿ, ಎಸ್ ವೈ ಎಸ್ ಶಾಖಾ ಸಾಂತ್ವನ ಕಾರ್ಯದರ್ಶಿ ಸಲಾಂ ಅಕ್ಕರೆಕೆರೆ ಹಾಗು ಶಾಖಾ ಕೆ ಎಂ ಜೆ, ಎಸ್ ವೈ ಎಸ್ ನಾಯಕರು, ಸದಸ್ಯರು ಉಪಸ್ಥಿತರಿದ್ದರು.

Comments